ನಂದನ್ ನೀಲೇಕಣಿ 
ವಾಣಿಜ್ಯ

ಅನಾಮಿಕ ಪತ್ರ; ಸ್ವತಂತ್ರ ತನಿಖೆಗೆ ನಂದನ್ ನಿಲೇಕಣಿ ತೀರ್ಮಾನ

ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ. 

ಬೆಂಗಳೂರು: ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ. 
  
ರಾಷ್ಟ್ರೀಯ ವಿನಿಮಯ ಮತ್ತು ನ್ಯೂಯಾರ್ಕ್ ಷೇರು ಕಂಪನಿ, ಬಿಎಸ್ ಇ ಲಿ.ಗೆ ಬರೆದಿರುವ ಪತ್ರದಲ್ಲಿ ಇನ್ಫೋಸಿಸ್, ಆಡಳಿತ ಮಂಡಳಿ ಸದಸ್ಯರೊಬ್ಬರಿಗೆ ಕಳೆದ ಸಪ್ಟೆಂಬರ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ಪತ್ರ ಬರೆದಿದ್ದು, ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅದನ್ನು ವಸ್ತುನಿಷ್ಠವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದೆ. 
  
ಅನಾಮಿಕ ಪತ್ರದಲ್ಲಿ ಕಂಪನಿಯ ಸಿಇಒ ಅಮೆರಿಕ ಮತ್ತು ಮುಂಬೈಗೆ ಕೈಗೊಂಡ ಅಂತಾರಾಷ್ಟ್ರೀಯ ಪ್ರಯಾಣದಲ್ಲಿ ಅವ್ಯವಹಾರ ನಡೆದಿರುವ ಕುರಿತು ದೂರುಗಳಿಗೆ. ಈ ಸಂಬಂಧ ಸಿಇಒ ಹಾಗೂ ಸಿಎಫ್ ಒ ವಿರುದ್ಧ ಸ್ವತಂತ್ರ ತನಿಖೆಗೆ ಆದೇಶಿಸಲಾಗುವುದು ಎಂದು ಕಂಪನಿ ಭರವಸೆ ನೀಡಿದೆ. 
 

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಫಲಿತಾಂಶವನ್ನು ಆಧರಿಸಿ ಲೆಕ್ಕಪತ್ರ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕಂಪನಿ ತಿಳಿಸಿದೆ. 
 
ಬಿಎಸ್ ಇ, ರಾಷ್ಟ್ರೀಯ ವಿನಿಮಯ ಮತ್ತು ನ್ಯೂಯಾರ್ಕ್ ಷೇರು ವಿನಿಮಯ ಮಾರುಕಟ್ಟೆಗಳಿಗೆ ಕಂಪನಿಯ ಅಧ್ಯಕ್ಷ ನಂದನ್ ನೀಲೇಕಣಿ ಹೆಸರಿನಲ್ಲಿ ಪತ್ರ ಬರೆಯಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT