ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸೆ. 26, 27ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ

10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ನಾಲ್ಕು ಬ್ಯಾಂಕ್ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.

ಕೋಲ್ಕತಾ: 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ನಾಲ್ಕು ಬ್ಯಾಂಕ್ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ(ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ(ಎಐಬಿಒಎ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್(ಐಎನ್‌ಬಿಒಸಿ) ಮತ್ತು ನ್ಯಾಷನಲ್ ಆರ್ಗನೈಸೇಶನ್ ಆಫ್ ಬ್ಯಾಂಕ್ ಅಧಿಕಾರಿಗಳು(ನೊಬೊ) ಜಂಟಿಯಾಗಿ ಸೆಪ್ಟೆಂಬರ್ 26 ಮತ್ತು 27 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ ಕರೆ ನೀಡಿವೆ ಎಂದು ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯ ದತ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ಯಾಂಕಿಂಗ್ ಉದ್ಯಮವನ್ನು ಸಂಪೂರ್ಣವಾಗಿ ಮುಚ್ಚುವ 48 ಗಂಟೆಗಳ ಈ ಮುಷ್ಕರಕ್ಕೆ ಇತರೆ ಅನೇಕ ಸಂಘಗಳು ಮತ್ತು ಸಂಸ್ಥೆಗಳು ತಮ್ಮೊಂದಿಗೆ ಸೇರಿಕೊಳ್ಳಲಿವೆ ಎಂದು ದತ್ತಾ ಹೇಳಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಸ್ಟ್ 30ರಂದು 10 ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ನಾಲ್ಕು ಬ್ಯಾಂಕ್‍ಗಳಿಗೆ ವಿಲೀನಗೊಳಿಸಿರುವ ಕುರಿತು ಘೋಷಣೆ ಮಾಡಿದ್ದರು. ಐದು ವರ್ಷಗಳ ಆರ್ಥಿಕತೆಯ ಕುಂಠಿತವನ್ನು ಸರಿ ದಾರಿಗೆ ತಂದು, ಬೆಳೆವಣಿಗೆಯತ್ತ ಕೊಂಡೊಯ್ಯಬೇಕು. ಹೀಗಾಗಿ ಸಣ್ಣ ಬ್ಯಾಂಕ್‍ಗಳನ್ನು ವಿಲೀನಗೊಳಿಸಿ ಬೃಹತ್ ಬ್ಯಾಂಕ್‍ಗಳನ್ನಾಗಿ ಮಾಡಿ, ವಿಶ್ವ ದರ್ಜೆಗೆ ಕೊಂಡೊಯ್ಯಬೇಕು ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?