ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಆರ್ಥಿಕ ಉತ್ತೇಜನಕ್ಕೆ ಕ್ರಮ; ದೇಶೀಯ ಕಂಪೆನಿಗಳ ಕಾರ್ಪೊರೇಟ್ ತೆರಿಗೆ ಶೇ. 25.17ಕ್ಕೆ ಇಳಿಸಿದ ಕೇಂದ್ರ ಸರ್ಕಾರ 

ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ. 

ಗೋವಾ: ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ.


ಪ್ರಸಕ್ತ ಹಣಕಾಸು ವರ್ಷ ಏಪ್ರಿಲ್ 1ರಿಂದ ಹೊಸ ತೆರಿಗೆ ದರ ಅನ್ವಯವಾಗಲಿದೆ ದೇಶೀಯ ಕಂಪೆನಿಗಳಿಗೆ ಅನ್ವಯವಾಗಲಿದೆ ಎಂದು ವಿತ್ತಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.


ಕಾರ್ಪೊರೇಟ್ ತೆರಿಗೆ ಕಡಿತ ಮತ್ತು ಇತರ ಪರಿಹಾರ ಕ್ರಮಗಳಿಂದ ವಾರ್ಷಿಕವಾಗಿ 1.45 ಲಕ್ಷ ಕೋಟಿ ರೂಪಾಯಿ ಹಣ ಸಂಗ್ರಹವಾಗಲಿದ್ದು ಇದರಿಂದ ಕಂಪೆನಿಗಳ ಹೂಡಿಕೆ ಮತ್ತು ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.


ಕೇಂದ್ರ ಸರ್ಕಾರದ ಕಾರ್ಪೊರೇಟ್ ತೆರಿಗೆ ಕಡಿತದಿಂದಾಗಿ ದೇಶೀಯ ಕಂಪೆನಿಗಳು ಯಾವುದೇ ಪ್ರೋತ್ಸಾಹ ಧನ ಅಥವಾ ರಿಯಾಯಿತಿ ಪಡೆದಿರದಿದ್ದರೆ ಶೇಕಡಾ 22ರಷ್ಟು ಕಾರ್ಪೋರೇಟ್ ತೆರಿಗೆ ಕಟ್ಟಬೇಕಾಗುತ್ತದೆ. ಆದಾಯ ತೆರಿಗೆ ಕಾಯ್ದೆ ಮತ್ತು ಹಣಕಾಸು ಕಾಯ್ದೆಯಲ್ಲಿನ ಬದಲಾವಣೆಯನ್ನು ಸರ್ಕಾರ ವಿಧೇಯಕ ಮೂಲಕ ತರಲಿದೆ.


ಶೇಕಡಾ 22ರಷ್ಟು ಆದಾಯ ತೆರಿಗೆ ಕಡಿತವನ್ನು ಬಯಸುವ ಕಂಪೆನಿಗಳು ಕನಿಷ್ಠ ಪರ್ಯಾಯ ತೆರಿಗೆ(ಮ್ಯಾಟ್) ಕಟ್ಟಬೇಕಾಗಿಲ್ಲ. ಅಕ್ಟೋಬರ್ 1ರ ನಂತರ ಸೇರಲ್ಪಟ್ಟ ಹೊಸ ದೇಶೀಯ ಉತ್ಪಾದನಾ ಕಂಪೆನಿಗಳು ಯಾವುದೇ ಪ್ರೋತ್ಸಾಹ ಧನವಿಲ್ಲದೆ ಆದಾಯ ತೆರಿಗೆಯನ್ನು ಶೇಕಡಾ 15ರ ದರದಲ್ಲಿ ಪಾವತಿಸಬಹುದು.


ಈ ಮಧ್ಯೆ, ತೆರಿಗೆ ದರ ಹೊಸ ಉತ್ಪಾದನಾ ಕಂಪೆನಿಗಳಿಗೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಸೇರಿ ಶೇಕಡಾ 17.01 ಆಗುತ್ತದೆ. 

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ್ ದಾಸ್ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಇದೊಂದು ದೃಢ ಹೆಜ್ಜೆ ಎಂದು ವ್ಯಾಖ್ಯಾನಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT