ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಆರ್ಥಿಕ ಉತ್ತೇಜನಕ್ಕೆ ಕ್ರಮ; ದೇಶೀಯ ಕಂಪೆನಿಗಳ ಕಾರ್ಪೊರೇಟ್ ತೆರಿಗೆ ಶೇ. 25.17ಕ್ಕೆ ಇಳಿಸಿದ ಕೇಂದ್ರ ಸರ್ಕಾರ 

ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ. 

ಗೋವಾ: ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ.


ಪ್ರಸಕ್ತ ಹಣಕಾಸು ವರ್ಷ ಏಪ್ರಿಲ್ 1ರಿಂದ ಹೊಸ ತೆರಿಗೆ ದರ ಅನ್ವಯವಾಗಲಿದೆ ದೇಶೀಯ ಕಂಪೆನಿಗಳಿಗೆ ಅನ್ವಯವಾಗಲಿದೆ ಎಂದು ವಿತ್ತಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.


ಕಾರ್ಪೊರೇಟ್ ತೆರಿಗೆ ಕಡಿತ ಮತ್ತು ಇತರ ಪರಿಹಾರ ಕ್ರಮಗಳಿಂದ ವಾರ್ಷಿಕವಾಗಿ 1.45 ಲಕ್ಷ ಕೋಟಿ ರೂಪಾಯಿ ಹಣ ಸಂಗ್ರಹವಾಗಲಿದ್ದು ಇದರಿಂದ ಕಂಪೆನಿಗಳ ಹೂಡಿಕೆ ಮತ್ತು ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.


ಕೇಂದ್ರ ಸರ್ಕಾರದ ಕಾರ್ಪೊರೇಟ್ ತೆರಿಗೆ ಕಡಿತದಿಂದಾಗಿ ದೇಶೀಯ ಕಂಪೆನಿಗಳು ಯಾವುದೇ ಪ್ರೋತ್ಸಾಹ ಧನ ಅಥವಾ ರಿಯಾಯಿತಿ ಪಡೆದಿರದಿದ್ದರೆ ಶೇಕಡಾ 22ರಷ್ಟು ಕಾರ್ಪೋರೇಟ್ ತೆರಿಗೆ ಕಟ್ಟಬೇಕಾಗುತ್ತದೆ. ಆದಾಯ ತೆರಿಗೆ ಕಾಯ್ದೆ ಮತ್ತು ಹಣಕಾಸು ಕಾಯ್ದೆಯಲ್ಲಿನ ಬದಲಾವಣೆಯನ್ನು ಸರ್ಕಾರ ವಿಧೇಯಕ ಮೂಲಕ ತರಲಿದೆ.


ಶೇಕಡಾ 22ರಷ್ಟು ಆದಾಯ ತೆರಿಗೆ ಕಡಿತವನ್ನು ಬಯಸುವ ಕಂಪೆನಿಗಳು ಕನಿಷ್ಠ ಪರ್ಯಾಯ ತೆರಿಗೆ(ಮ್ಯಾಟ್) ಕಟ್ಟಬೇಕಾಗಿಲ್ಲ. ಅಕ್ಟೋಬರ್ 1ರ ನಂತರ ಸೇರಲ್ಪಟ್ಟ ಹೊಸ ದೇಶೀಯ ಉತ್ಪಾದನಾ ಕಂಪೆನಿಗಳು ಯಾವುದೇ ಪ್ರೋತ್ಸಾಹ ಧನವಿಲ್ಲದೆ ಆದಾಯ ತೆರಿಗೆಯನ್ನು ಶೇಕಡಾ 15ರ ದರದಲ್ಲಿ ಪಾವತಿಸಬಹುದು.


ಈ ಮಧ್ಯೆ, ತೆರಿಗೆ ದರ ಹೊಸ ಉತ್ಪಾದನಾ ಕಂಪೆನಿಗಳಿಗೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಸೇರಿ ಶೇಕಡಾ 17.01 ಆಗುತ್ತದೆ. 

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ್ ದಾಸ್ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಇದೊಂದು ದೃಢ ಹೆಜ್ಜೆ ಎಂದು ವ್ಯಾಖ್ಯಾನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT