ಸಂಗ್ರಹ ಚಿತ್ರ 
ವಾಣಿಜ್ಯ

ಖಾತೆದಾರರಿಗೆ ವಿಧಿಸಿದ್ದ 1000 ವಿತ್ ಡ್ರಾ ನಿರ್ಬಂಧವನ್ನು ದಿಢೀರ್ ಅಂತ ಆರ್‌ಬಿಐ ಹಿಂದಕ್ಕೆ ಪಡೆದಿದ್ದೇಕೆ?

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ನಿರ್ಬಂಧಗಳನ್ನು ವಿಧಿಸಿದ್ದು ಅದರಲ್ಲಿ ಪ್ರಮುಖವಾಗಿದ್ದ 1000 ವಿತ್ ಡ್ರಾ ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ.

ಮುಂಬೈ: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ನಿರ್ಬಂಧಗಳನ್ನು ವಿಧಿಸಿದ್ದು ಅದರಲ್ಲಿ ಪ್ರಮುಖವಾಗಿದ್ದ 1000 ವಿತ್ ಡ್ರಾ ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ. 

ಪಿಎಂಸಿ ಖಾತೆದಾರರಿಗೆ 1000 ರುಪಾಯಿ ಮಾತ್ರ ವಿತ್ ಡ್ರಾ ಮಾಡಲು ಆರ್‌ಬಿಐ ನಿರ್ಬಂಧ ಹೇರಿತ್ತು. ಇದರಿಂದ ಗ್ರಾಹಕರಿಗೆ ತೊಂದರೆಯಾಗಿತ್ತು. ಇದನ್ನು ಮನಗಂಡ ಆರ್‌ಬಿಐ ಇದೀಗ ವಿತ್ ಡ್ರಾ ನಿರ್ಬಂಧವನ್ನು ವಾಪಸ್ ಪಡೆದು 10,000 ಡ್ರಾ ಮಾಡಲು 6 ತಿಂಗಳ ಕಾಲ ಅವಕಾಶ ನೀಡಿದೆ. ಇದರೊಂದಿಗೆ ಶೇಖಡ 60ರಷ್ಟು ಖಾತೆದಾರರು ಹಣವನ್ನು ವಿತ್ ಡ್ರಾ ಮಾಡುವ ಅವಕಾಶ ಸಿಕ್ಕಿದೆ.

ಈ ಹಿಂದೆ ಪಿಎಂಸಿ ಬ್ಯಾಂಕ್ ಸಂಬಂಧ ಆರ್‌ಬಿಐ ವಿಧಿಸಿದ್ದ ನಿರ್ಬಂಧಗಳು:
1. ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಆರ್ ಬಿಐ ಕಾರ್ಯಾಚರಣೆಯ ನಿರ್ಬಂಧ ವಿಧಿಸಿದೆ.
2. ಇಂದಿನಿಂದ ಆರು ತಿಂಗಳ ಕಾಲ ಈ ನಿರ್ಬಂಧಗಳು ಜಾರಿಯಲ್ಲಿರುತ್ತವೆ.
3. ಬ್ಯಾಂಕ್ ಗ್ರಾಹಕರು ಆರು ತಿಂಗಳ ಕಾಲ 1 ಸಾವಿರ ರೂಪಾಯಿಗಿಂತ ಹೆಚ್ಚು ಹಣ ಡ್ರಾ ಮಾಡಲು ಸಾಧ್ಯವಿಲ್ಲ.
4. ಈ ಎಲ್ಲಾ ನಿರ್ಬಂಧಗಳ ನಡುವೆಯೂ ಸಹಕಾರಿ ಬ್ಯಾಂಕ್, ಆರ್ ಬಿಐ ಮುಂದಿನ ಆದೇಶದವರೆಗೆ ತನ್ನ ದೈನಂದಿನ ವ್ಯವಹಾರ ಮುಂದುವರೆಸಬೇಕು.
5. ಪಿಎಂಸಿ ದೇಶದ ಆರು ರಾಜ್ಯಗಳಲ್ಲಿ 137 ಶಾಖೆಗಳನ್ನು ಹೊಂದಿದ್ದು, ಯಾವುದೇ ಶಾಖೆಯಲ್ಲೂ ಸಾಲ ಮಂಜೂರು ಅಥವಾ ಸಾಲ ನವೀಕರಣಕ್ಕೆ ಅವಕಾಶ ಇಲ್ಲ.
6. ಮುಂಬೈ ಮೂಲದ ಈ ಸಹಕಾರಿ ಬ್ಯಾಂಕ್ ಹಣವನ್ನು ಎರವಲು ಪಡೆಯುವುದು ಮತ್ತು ಹೊಸ ಠೇವಣಿಗಳನ್ನು ಸ್ವೀಕರಿಸುವುದು ಸೇರಿದಂತೆ ಯಾವುದೇ ಹೊಣೆಗಾರಿಕೆಯನ್ನು ಹೊಂದುವಂತಿಲ್ಲ.
7. ಸಹಕಾರಿ ಬ್ಯಾಂಕ್ ತನ್ನ ಯಾವುದೇ ಆಸ್ತಿ ಅಥವಾ ಸ್ವತ್ತುಗಳನ್ನು ವರ್ಗಾಯಿಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.
8. ಆರ್ ಬಿಐ ನಿರ್ದೇಶನದ ಪ್ರತಿಯನ್ನು ಪ್ರತಿ ಖಾತೆದಾರನಿಗೂ ಕುಳುಹಿಸಬೇಕು ಮತ್ತು ಅದನ್ನು ಬ್ಯಾಂಕ್ ಮತ್ತು ಬ್ಯಾಂಕ್ ವೆಬ್ ಸೈಟ್ ನಲ್ಲೂ ಪ್ರದರ್ಶಿಸಬೇಕು
9. ಸಂದರ್ಭಗಳಿಗೆ ಅನುಗುಣವಾಗಿ ಈ ನಿರ್ದೇಶನಗಳನ್ನು ಮಾರ್ಪಾಡು ಮಾಡುವುದನ್ನು ಪರಿಗಣಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.
10. ಮಾರ್ಚ್ 2019ರ ವರೆಗೆ, ಪಿಎಂಸಿ ಬ್ಯಾಂಕ್ 11,617 ಕೋಟಿ ರೂಪಾಯಿ ಠೇವಣಿ ಹಾಗೂ 8,383 ಕೋಟಿ ರೂಪಾಯಿ ಮುಂಗಡ ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT