ವಾಣಿಜ್ಯ

ಲಾಕ್ ಡೌನ್ ಆರ್ಥಿಕ ಹಿಂಜರಿತದ ಭೀತಿ ಮಧ್ಯೆ ಮೋದಿ ಸರ್ಕಾರದಿಂದ ಪ್ರೋತ್ಸಾಹಕ ಪ್ಯಾಕೇಜ್?

ಕೊರೋನಾ ವೈರಸ್ ಸೋಂಕು ತಗುಲಿ ಅದು ವ್ಯಾಪಕವಾಗಿ ಹಬ್ಬುವುದನ್ನು ತಡೆಗಟ್ಟಲು ಲಾಕ್ ಡೌನ್ ಘೋಷಣೆಯಾದ ನಂತರ ದೇಶದಲ್ಲಿನ ಆರ್ಥಿಕ ಪರಿಸ್ಥಿತಿಯನ್ನು ವಿವರಿಸಲು ನಿನ್ನೆ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ನವದೆಹಲಿ: ಕೊರೋನಾ ವೈರಸ್ ಸೋಂಕು ತಗುಲಿ ಅದು ವ್ಯಾಪಕವಾಗಿ ಹಬ್ಬುವುದನ್ನು ತಡೆಗಟ್ಟಲು ಲಾಕ್ ಡೌನ್ ಘೋಷಣೆಯಾದ ನಂತರ ದೇಶದಲ್ಲಿನ ಆರ್ಥಿಕ ಪರಿಸ್ಥಿತಿಯನ್ನು ವಿವರಿಸಲು ನಿನ್ನೆ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಲಾಕ್ ಡೌನ್ ನಿಂದಾಗಿ ತೀವ್ರ ದುಸ್ಥಿತಿ ಎದುರಿಸುತ್ತಿರುವ ವಲಯಗಳಿಗೆ ಪ್ರೋತ್ಸಾಹಕ ಪ್ಯಾಕೇಜ್ ನೀಡಲು ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ವಿಮಾನಯಾನ, ಹೊಟೇಲ್, ಎಂಎಸ್ ಎಂಇ ಮತ್ತು ರಫ್ತು ವಲಯಗಳಲ್ಲಿ ಬೃಹತ್ ಮಟ್ಟದಲ್ಲಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಯಿದೆ.

ವೈರಸ್ ಲಾಕ್ ಡೌನ್ ನಿಂದ ಆಗಿರುವ ಪರಿಣಾಮದ ಬಗ್ಗೆ ಆರ್ಥಿಕ ಕಾರ್ಯಪಡೆ ರಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಲಾಕ್ ಡೌನ್ ನಿಂದ ಆದ ಪ್ರಾಥಮಿಕ ಪರಿಣಾಮ ಕುರಿತು ಪ್ರಧಾನ ಮಂತ್ರಿಗಳಿಗೆ ವಿತ್ತ ಸಚಿವೆ ವಿವರಿಸಿದರು. ಹಣಕಾಸು ವಲಯದ ಬಗ್ಗೆ ವಿವರವಾಗಿ ಚರ್ಚೆ ನಡೆಸಲಾಯಿತು. ಹಲವು ವಲಯಗಳ ಮೇಲೆ ಮುಂಬರುವ ದಿನಗಳಲ್ಲಿ ಆಗುವ ಪರಿಣಾಮ ಮತ್ತು ಆರ್ಥಿಕ ಪುನಶ್ಚೇತನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಕುಸಿದ ಜಿಡಿಪಿ ದರ ಮತ್ತು ಇಲ್ಲಿಯವರೆಗೆ ಘೋಷಿಸಲಾದ ಪರಿಹಾರ ಪ್ಯಾಕೇಜ್ ಗಳಲ್ಲಿ ಆದ ಪ್ರಗತಿ ಕುರಿತು ಸಹ ಚರ್ಚೆ ನಡೆಸಲಾಯಿತು. ಕಳೆದ ವಾರ ಅಂತಾರಾಷ್ಟ್ರೀಯ ಹಣಕಾಸು ನಿಧಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಭಾರತದ ಜಿಡಿಪಿ ಅಭಿವೃದ್ಧಿ ದರವನ್ನು ಕಡಿತಗೊಳಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT