ಚೀನಾಗೆ ಪಾರ್ಯಾಯವಾಗಿ ವಿದೇಶಿ ಕಂಪನಿಗಳಿಗೆ ಕರ್ನಾಟಕ ಗಾಳ! 
ವಾಣಿಜ್ಯ

ಚೀನಾಗೆ ಪಾರ್ಯಾಯವಾಗಿ ವಿದೇಶಿ ಕಂಪನಿಗಳಿಗೆ ಕರ್ನಾಟಕ ಗಾಳ! 

ಕೊರೋನಾ ವೈರಸ್ ನಿಂದಾಗಿ ಪ್ರಪಂಚದಲ್ಲಿ ಬದಲಾದ ಸ್ಥಿತಿಗತಿಗಳಿಂದ ಲಾಭ ಪಡೆಯಲು ಕರ್ನಾಟಕ ಮುಂದಾಗಿದೆ. 

ಬೆಂಗಳೂರು: ಕೊರೋನಾ ವೈರಸ್ ನಿಂದಾಗಿ ಪ್ರಪಂಚದಲ್ಲಿ ಬದಲಾದ ಸ್ಥಿತಿಗತಿಗಳಿಂದ ಲಾಭ ಪಡೆಯಲು ಕರ್ನಾಟಕ ಮುಂದಾಗಿದೆ. 

ಈಗ ಉಂಟಾಗಿರುವ ಪರಿಸ್ಥಿತಿಯಿಂದಾಗಿ ದೊಡ್ಡ ಕಂಪನಿಗಳು ಚೀನಾಗೆ ಪರ್ಯಾಯವನ್ನು ಹುಡುಕುತ್ತಿದ್ದು, ಇದರ ಲಾಭವನ್ನು ಕರ್ನಾಟಕ ಪಡೆಯಲು ಮುಂದಾಗಿದೆ.ಇದರ ಭಾಗವಾಗಿ ಈಗಾಗಲೇ ಕರ್ನಾಟಕ ಕೈಗಾರಿಕಾ ಇಲಾಖೆ ಹೂಡಿಕೆದಾರರೊಂದಿಗೆ ಮಾತುಕತೆ ನಡೆಸುತ್ತಿದೆ. "ಈಗಾಗಲೇ ಜಪಾನ್, ದಕ್ಷಿಣ ಕೊರಿಯಾ ಹಾಗೂ ಬೇರೆ ರಾಷ್ಟ್ರಗಳಿಂದ ನಮಗೆ ಒಂದಷ್ಟು ಹೂಡಿಕೆದಾರರು ಸಿಕ್ಕಿದ್ದಾರೆ. ಮಾತುಕತೆ ಸಕಾರಾತ್ಮಕವಾಗಿದೆ. ದೂರವಾಣಿ, ಇ-ಮೇಲ್, ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಾಗುತ್ತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ತಿಳಿಸಿದ್ದಾರೆ. 

ಕೊರೋನೋತ್ತರವಾಗಿ ಹೂಡಿಕೆದಾರರನ್ನು ಸೆಳೆಯಲು ಎದುರಾಗಲಿರುವ ಪೈಪೋಟಿ ನೀಡಲು ಕರ್ನಾಟಕದಲ್ಲಿರುವ ಉತ್ತಮ ಕೈಗಾರಿಕಾ ವ್ಯವಸ್ಥೆ ನುರಿತ ನೌಕರರ ಲಭ್ಯತೆ ಎಲ್ಲವೂ ಸಹಕಾರಿಯಾಗಿರಲಿದೆ. ಆದರೆ ಭೂಸ್ವಾಧೀನ ಹಾಗೂ ಅನುಮತಿ ನೀಡುವಲ್ಲಿ ತ್ವರಿತ ಪ್ರಕ್ರಿಯೆಗಳು ಸವಾಲಿನ ಸಂಗತಿಯಾಗಲಿವೆ ಎಂದು ಗುಪ್ತಾ ತಿಳಿಸಿದ್ದಾರೆ. ಜಪಾನ್ ನ ಕಂಪನಿಗಳಿಗೆ ಈಗಾಗಲೇ 500 ಎಕರೆ ಜಪಾನ್ ಇಂಡಸ್ಟ್ರಿಯಲ್ ಟೌನ್ ಶಿಪ್ ಸಿದ್ಧವಾಗಿದೆ. ಕಳೆದ ಆರು ತಿಂಗಳಿನಿಂದ ಅದನ್ನು ಮಾರ್ಕೆಟಿಂಗ್ ಮಾಡಲು ಯತ್ನಿಸುತ್ತಿದ್ದೇವೆ. ಈ ನಡುವೆ ಕಾಂಪಿಟ್ ವಿತ್ ಚೀನಾ ಕ್ಲಸ್ಟರ್ ಗಳೂ ಇದೆ ಎನ್ನುತ್ತಾರೆ ಗೌರವ್ ಗುಪ್ತ. 

ಈ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಮುಂದಿನ 2-3 ತಿಂಗಳುಗಳಲ್ಲಿ ಸಮಸ್ಯೆಗಳು ಎದುರಾಗಬಹುದು. ನಂತರದ ದಿನಗಳಲ್ಲಿ ಅನುಕೂಲ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!