ಸಂಗ್ರಹ ಚಿತ್ರ 
ವಾಣಿಜ್ಯ

ಕೋವಿಡ್ ಬಿಕ್ಕಟ್ಟು: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ತಡೆ

ಕೊರೋನಾವೈರಸ್ ಲಾಕ್‌ಡೌನ್ ಸಮಯದಲ್ಲಿ ತೆರಿಗೆ ಸಂಗ್ರಹಕ್ಕೆ ಸಮಸ್ಯೆಯಾಗಿರುವ ಹಿನ್ನೆಲೆ ಕೇಂದ್ರ ನೌಕರರ ಹೆಚ್ಚುವರಿ ತುಟ್ಟಿಭತ್ಯೆ (ಡಿಎ ಮತ್ತು ಡಿಆರ್‌) ಹೆಚ್ಚಳ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ.  

ನವದೆಹಲಿ: ಕೊರೋನಾವೈರಸ್ ಲಾಕ್‌ಡೌನ್ ಸಮಯದಲ್ಲಿ ತೆರಿಗೆ ಸಂಗ್ರಹಕ್ಕೆ ಸಮಸ್ಯೆಯಾಗಿರುವ ಹಿನ್ನೆಲೆ ಕೇಂದ್ರ ನೌಕರರ ಹೆಚ್ಚುವರಿ ತುಟ್ಟಿಭತ್ಯೆ (ಡಿಎ ಮತ್ತು ಡಿಆರ್‌) ಹೆಚ್ಚಳ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. 

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 12 ರಿಂದ 17 ಕ್ಕೆ ಹೆಚ್ಚಿಸಬೇಕೆಂದು ತಾನು ಈ ಹಿಂದೆ ತೆಗೆದುಕೊಂಡಿದ್ದ ನಿರ್ಧಾರವನ್ನು ತಡೆಹಿಡಿಯಲು ಸರ್ಕಾರ ತೀರ್ಮಾನಿಸಿದೆ.ಕೇಂದ್ರದ ಈ ಕ್ರಮವು ಸುಮಾರು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರ ಮೇಲೆ ಪರಿಣಾಮಬೀರಲಿದೆ.

"ಕೇಂದ್ರ ಸರ್ಕಾರಿ ನೌಕರರಿಗೆ ಪಾವತಿಸಬೇಕಾದ ಹೆಚ್ಚುವರಿ ಭತ್ಯೆ ಮತ್ತು ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ಸಂದಾಯವಾಗುವ ಡಿಎ ಗಳನ್ನು 2020 ರ ಜನವರಿ 1ರಿಂದ ಅನ್ವಯಿಸುವಂತೆ ಪಾವತಿಸಲು ಸಾಧ್ಯವಿಲ್ಲ " ಸರ್ಕಾರಿ ಹೇಳಿಕೆಯಲ್ಲಿ ಹೇಳಿದೆ.

ಈ ಹಿಂದೆ ಮಾರ್ಚ್ 13 ರಂದು ಕೇಂದ್ರ ನೌಕರರ  ಡಿಎಯನ್ನು ಶೇಕಡಾ 5 ರಷ್ಟು ಹೆಚ್ಚಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿತ್ತು. ಇದು ಕೇಂದ್ರ ಬೊಕ್ಕಸಕ್ಕೆ  ಹೆಚ್ಚುವರಿ 14,510 ಕೋಟಿ ರೂ ಹೊರೆಯನ್ನು ತಂದಿತ್ತು. ಆದರೆ ಇದೀಗ ಕೊರೋನಾ ವಿರುದ್ಧ ಹೋರಾಡಲು ದೇಶ 40 ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ನಲ್ಲಿದೆ. ಹಾಗಾಗಿ ಮಾರ್ಚ್ 24 ರಿಂದ ಹೆಚ್ಚಿನ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸುವುದರಿಂದ ಸರ್ಕಾರವು ಹಣದ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದು ಭಾರತೀಯ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೆಚ್ಚಿನ ಇಲಾಖೆಗಳ ಬಜೆಟ್ ಹಂಚಿಕೆಯನ್ನು ಶೇಕಡಾ 40 ರಷ್ಟು ಕಡಿತಗೊಳಿಸುವುದು ಸೇರಿದಂತೆ ವೆಚ್ಚ ಕಡಿತ ಕ್ರಮಗಳ ಸರಣಿಯನ್ನು  ಸರ್ಕಾರ ಇತ್ತೀಚೆಗೆ ಘೋಷಿಸಿತು.

ಸಂಸತ್ತಿನ ಸದಸ್ಯರ (ಸಂಸದರ) ವೇತನ, ಭತ್ಯೆ ಮತ್ತು ಪಿಂಚಣಿಗಳನ್ನು ಒಂದು ವರ್ಷ ಕಾಲ  ಶೇ 30 ರಷ್ಟು ಕಡಿಮೆ ಮಾಡುವ ಸುಗ್ರೀವಾಜ್ಞೆಗೆ ಏಪ್ರಿಲ್ 6 ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತು ಮತ್ತು ಈ ಮೊತ್ತವನ್ನು  ಕೊರೋನಾ ವಿರುದ್ಧದ ಹೋರಾಟಕ್ಕೆ ಬಳಕೆ ಮಾಡಲಾಗುವುದೆಂದು ಹೇಳಿದೆ. ರಾಷ್ಟ್ರಪತಿಗಳು, ಉಪರಾಷ್ಟ್ರಪತಿ, ರಾಜ್ಯಗಳ ರಾಜ್ಯಪಾಲರು ಸಹ ಸಾಮಾಜಿಕ ಜವಾಬ್ದಾರಿಯಾಗಿ ವೇತನ ಕಡಿತವನ್ನು ತೆಗೆದುಕೊಳ್ಳಲು ಸ್ವಯಂಪ್ರೇರಣೆಯಿಂದ ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!