ಸಂಗ್ರಹ ಚಿತ್ರ 
ವಾಣಿಜ್ಯ

ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟ, 29 ಲಕ್ಷ ನಿರುದ್ಯೋಗ ಸಾಧ್ಯತೆ

ಕೊರೋನಾ ವೈರಸ್ 'ಕೋವಿಡ್ -19' ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ವರ್ಷ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟು ನಷ್ಟವಾಗಲಿದ್ದು, 29 ಲಕ್ಷಕ್ಕೂ ಹೆಚ್ಚು ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ಹೇಳಲಾಗಿದೆ.

ನವದೆಹಲಿ: ಕೊರೋನಾ ವೈರಸ್ 'ಕೋವಿಡ್ -19' ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ವರ್ಷ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟು ನಷ್ಟವಾಗಲಿದ್ದು, 29 ಲಕ್ಷಕ್ಕೂ ಹೆಚ್ಚು ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಸ್ಥೆ (ಎಐಟಿಎ) ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ, ಪ್ರಯಾಣಿಕರ ವಿಮಾನಯಾನ ಸೇವೆಯ ಮೇಲೆ ಮೂರು ತಿಂಗಳ ನಿರ್ಬಂಧ ಹೇರಿದರೆ, ನಷ್ಟದ ಪ್ರಮಾಣ ಹೆಚ್ಚಾಗುತ್ತದೆ. 2019 ಕ್ಕೆ ಹೋಲಿಸಿದರೆ, ದೇಶದಲ್ಲಿ ಪ್ರಯಾಣಿಕರ ಸಂಖ್ಯೆ 8.98  ಕೋಟಿಗಳಷ್ಟು ಇಳಿಯುತ್ತದೆ. ಅಂದರೆ ಸುಮಾರು 47 ಪ್ರತಿಶತ ಕಡಿತವಾಗುತ್ತದೆ. ಇದರಿಂದ ವಿಮಾನಯಾನ ಕಂಪನಿಗಳಿಗೆ 1,122.1 ಕೋಟಿ ಡಾಲರ್ ನಷ್ಟವಾಗಲಿದ್ದು, 29,32,900 ಜನರ ಉದ್ಯೋಗಕ್ಕೆ ಕತ್ತರಿ ಬೀಳಲಿದೆ ಎಂದು ಹೇಳಿದೆ.

ಏಷ್ಯಾ-ಪೆಸಿಫಿಕ್ ಪ್ರದೇಶಕ್ಕಾಗಿ ಬಿಡುಗಡೆಯಾದ ವರದಿಯು ಭಾರತದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಉದ್ಯೋಗ ಕಡಿತವಾಗಲಿದೆ. ಆದಾಯ ನಷ್ಟದ ವಿಷಯದಲ್ಲಿ ಭಾರತವು ಜಪಾನ್ ಮತ್ತು ಆಸ್ಟ್ರೇಲಿಯಾದ ನಂತರ ಮೂರನೇ ಸ್ಥಾನದಲ್ಲಿದೆ. ವಿಮಾನಯಾನ ಆದಾಯವು 2,200 ಕೋಟಿ ಮತ್ತು  ಆಸ್ಟ್ರೇಲಿಯಾದಲ್ಲಿ 1,400 ಕೋಟಿ ಡಾಲರ್ ಗಿಂತಲೂ ಕಡಿಮೆಯಾಗುತ್ತದೆ ಎಂದು ಹೇಳಿದೆ.

ಎಐಟಿಎ ಈ ಹಿಂದೆ ಏಪ್ರಿಲ್ 14 ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಭಾರತದಲ್ಲಿ ಪ್ರಯಾಣಿಕರ ಸಂಖ್ಯೆ ಶೇಕಡಾ 36 ರಷ್ಟು ಕುಸಿಯುತ್ತದೆ, ಇದರಿಂದಾಗಿ 884 ಮಿಲಿಯನ್ ಡಾಲರ್ ಆದಾಯ ನಷ್ಟ ಮತ್ತು 22.47 ಲಕ್ಷ ಜನರ ಉದ್ಯೋಗ ನಷ್ಟವಾಗಲಿದೆ ಎಂದು ಸೂಚಿಸಿತ್ತು. ಹಿಂದಿನ  ವರದಿಯಿಂದ ಪರಿಸ್ಥಿತಿ ಹದಗೆಟ್ಟಿದೆ ಎಂದು ಏಷ್ಯಾ-ಪೆಸಿಫಿಕ್ ಪ್ರದೇಶದ ಐಟಾ ಉಪಾಧ್ಯಕ್ಷ ಕಾನ್ವರ್ಸ್ ಕ್ಲಿಫರ್ಡ್ ಹೇಳಿದ್ದಾರೆ. ವಿಮಾನಯಾನ ಕಂಪನಿಗಳು ತಮ್ಮ ಅಸ್ತಿತ್ವವನ್ನು ಉಳಿಸಲು ಹೆಣಗಾಡುತ್ತಿವೆ. ಸರ್ಕಾರಗಳು ಅವರಿಗೆ ಸಹಾಯ ಮಾಡದಿದ್ದರೆ ಮತ್ತು ಅನೇಕ ವಿಮಾನಯಾನ  ಸಂಸ್ಥೆಗಳು ನಿಲ್ಲಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT