ಪಿ ಚಿದಂಬರಂ 
ವಾಣಿಜ್ಯ

ಎಂಎಸ್‌ಎಂಇಗಳಿಗೆ ವೇತನ ಸುರಕ್ಷತಾ ನೆರವು ಒದಗಿಸುವಂತೆ ಕೇಂದ್ರಕ್ಕೆ ಚಿದಂಬರಂ ಒತ್ತಾಯ

ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯಕ್ಕೆ ವೇತನ ಸುರಕ್ಷತಾ ನೆರವು ಮತ್ತು ಸಾಲ ಖಾತರಿ ನಿಧಿಗಾಗಿ ತಲಾ 1 ಲಕ್ಷ ಕೋಟಿ ರೂ.ಗಳ ಎರಡು ಹಣಕಾಸು ಪ್ಯಾಕೇಜ್‌ಗಳನ್ನು ಒದಗಿಸುವಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶದ ಶ್ರಮಿಕ ವರ್ಗದಲ್ಲಿ ನಿಜವಾಗಿಯೂ ಆತಂಕವಿದೆ ಇದೆ ಎಂದು ಪ್ರತಿಪಾದಿಸಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ, ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯಕ್ಕೆ ವೇತನ ಸುರಕ್ಷತಾ ನೆರವು ಮತ್ತು ಸಾಲ ಖಾತರಿ ನಿಧಿಗಾಗಿ ತಲಾ 1 ಲಕ್ಷ ಕೋಟಿ ರೂ.ಗಳ ಎರಡು ಹಣಕಾಸು ಪ್ಯಾಕೇಜ್‌ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್ 30 ಅಂದರೆ ನಾಳೆ ತಿಂಗಳ ಕೊನೆಯ ಕೆಲಸದ ದಿನ. ಭಾರತದ 12 ಕೋಟಿಗೂ ಹೆಚ್ಚು ಜನರು ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ. ಏಪ್ರಿಲ್ ತಿಂಗಳ ವೇತನ, ಸಂಬಳ ಬರುತ್ತದೆಯೇ ಎಂಬ ಆತಂಕದಲ್ಲಿದ್ದಾರೆ ಎಂದು ಚಿದಂಬರಂ ಬುಧವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 

ಎಂಎಸ್‌ಎಂಇಗಳಿಗೆ ಏಪ್ರಿಲ್ ತಿಂಗಳಿಗೆ ವೇತನಗಳು ಮತ್ತು ಸಂಬಳವನ್ನು ಪಾವತಿಸಲು ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂ. ವೇತನ ಸುರಕ್ಷತಾ ನೆರವು ನೀಡಬೇಕು ಮತ್ತು ಎಂಎಸ್‌ಎಂಇಗಳಿಗೆ 1 ಲಕ್ಷ ಕೋಟಿ ರೂ.ಗಳ ಸಾಲ ಖಾತರಿ ನಿಧಿ ಒದಗಿಸಬೇಕು. ಇದು ಎಂಎಸ್‍ಎಂಇಗಳು ಬ್ಯಾಂಕ್‍ಗಳಿಗೆ ಹೋಗಿ ಸಾಲ ಪಡೆಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಎಂಎಸ್‌ಎಂಇ ಸಚಿವಾಲಯದ ವಾರ್ಷಿಕ ವರದಿಯನ್ನು ಉಲ್ಲೇಖಿಸಿದ ಸಚಿವರು 11 ಕೋಟಿ ಜನರು 6.3 ಕೋಟಿ ಎಂಎಸ್‌ಎಂಇಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಲಾಕ್‍ಡೌನ್‍ನಿಂದ ಇವರಲ್ಲಿ ಅನೇಕರು ಏಪ್ರಿಲ್ ತಿಂಗಳಲ್ಲಿ ಒಂದೇ ದಿನವೂ ಕೆಲಸ ಮಾಡಿಲ್ಲ. ಇವರೆಲ್ಲ ಆದಾಯವಿಲ್ಲದೆ ಕುಟುಂಬವನ್ನು ಹೇಗೆ ಪೋಷಿಸುತ್ತಾರೆ? ಅನೇಕ ಉದ್ಯಮಗಳು ವೇತನ ಮತ್ತು ಸಂಬಳವನ್ನು ನೀಡಲು ಸಾಧ್ಯವಾಗುತ್ತಿಲ್ಲದ ಕಾರಣ ಈ 11 ಕೋಟಿ ಜನರ ಜೀವನೋಪಾಯ ಸದ್ಯ ಅಪಾಯದಲ್ಲಿದೆ ಎಂದು ಚಿದಂಬರಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT