ಪಿ ಚಿದಂಬರಂ 
ವಾಣಿಜ್ಯ

ಎಂಎಸ್‌ಎಂಇಗಳಿಗೆ ವೇತನ ಸುರಕ್ಷತಾ ನೆರವು ಒದಗಿಸುವಂತೆ ಕೇಂದ್ರಕ್ಕೆ ಚಿದಂಬರಂ ಒತ್ತಾಯ

ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯಕ್ಕೆ ವೇತನ ಸುರಕ್ಷತಾ ನೆರವು ಮತ್ತು ಸಾಲ ಖಾತರಿ ನಿಧಿಗಾಗಿ ತಲಾ 1 ಲಕ್ಷ ಕೋಟಿ ರೂ.ಗಳ ಎರಡು ಹಣಕಾಸು ಪ್ಯಾಕೇಜ್‌ಗಳನ್ನು ಒದಗಿಸುವಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶದ ಶ್ರಮಿಕ ವರ್ಗದಲ್ಲಿ ನಿಜವಾಗಿಯೂ ಆತಂಕವಿದೆ ಇದೆ ಎಂದು ಪ್ರತಿಪಾದಿಸಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ, ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯಕ್ಕೆ ವೇತನ ಸುರಕ್ಷತಾ ನೆರವು ಮತ್ತು ಸಾಲ ಖಾತರಿ ನಿಧಿಗಾಗಿ ತಲಾ 1 ಲಕ್ಷ ಕೋಟಿ ರೂ.ಗಳ ಎರಡು ಹಣಕಾಸು ಪ್ಯಾಕೇಜ್‌ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್ 30 ಅಂದರೆ ನಾಳೆ ತಿಂಗಳ ಕೊನೆಯ ಕೆಲಸದ ದಿನ. ಭಾರತದ 12 ಕೋಟಿಗೂ ಹೆಚ್ಚು ಜನರು ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ. ಏಪ್ರಿಲ್ ತಿಂಗಳ ವೇತನ, ಸಂಬಳ ಬರುತ್ತದೆಯೇ ಎಂಬ ಆತಂಕದಲ್ಲಿದ್ದಾರೆ ಎಂದು ಚಿದಂಬರಂ ಬುಧವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 

ಎಂಎಸ್‌ಎಂಇಗಳಿಗೆ ಏಪ್ರಿಲ್ ತಿಂಗಳಿಗೆ ವೇತನಗಳು ಮತ್ತು ಸಂಬಳವನ್ನು ಪಾವತಿಸಲು ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂ. ವೇತನ ಸುರಕ್ಷತಾ ನೆರವು ನೀಡಬೇಕು ಮತ್ತು ಎಂಎಸ್‌ಎಂಇಗಳಿಗೆ 1 ಲಕ್ಷ ಕೋಟಿ ರೂ.ಗಳ ಸಾಲ ಖಾತರಿ ನಿಧಿ ಒದಗಿಸಬೇಕು. ಇದು ಎಂಎಸ್‍ಎಂಇಗಳು ಬ್ಯಾಂಕ್‍ಗಳಿಗೆ ಹೋಗಿ ಸಾಲ ಪಡೆಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಎಂಎಸ್‌ಎಂಇ ಸಚಿವಾಲಯದ ವಾರ್ಷಿಕ ವರದಿಯನ್ನು ಉಲ್ಲೇಖಿಸಿದ ಸಚಿವರು 11 ಕೋಟಿ ಜನರು 6.3 ಕೋಟಿ ಎಂಎಸ್‌ಎಂಇಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಲಾಕ್‍ಡೌನ್‍ನಿಂದ ಇವರಲ್ಲಿ ಅನೇಕರು ಏಪ್ರಿಲ್ ತಿಂಗಳಲ್ಲಿ ಒಂದೇ ದಿನವೂ ಕೆಲಸ ಮಾಡಿಲ್ಲ. ಇವರೆಲ್ಲ ಆದಾಯವಿಲ್ಲದೆ ಕುಟುಂಬವನ್ನು ಹೇಗೆ ಪೋಷಿಸುತ್ತಾರೆ? ಅನೇಕ ಉದ್ಯಮಗಳು ವೇತನ ಮತ್ತು ಸಂಬಳವನ್ನು ನೀಡಲು ಸಾಧ್ಯವಾಗುತ್ತಿಲ್ಲದ ಕಾರಣ ಈ 11 ಕೋಟಿ ಜನರ ಜೀವನೋಪಾಯ ಸದ್ಯ ಅಪಾಯದಲ್ಲಿದೆ ಎಂದು ಚಿದಂಬರಂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT