ರವಿಶಂಕರ್ ಪ್ರಸಾದ್ 
ವಾಣಿಜ್ಯ

ಭಾರತದಲ್ಲೇ ಮೊಬೈಲ್ ತಯಾರಿಕೆಗೆ ಕಂಪನಿಗಳ ದುಂಬಾಲು, 3 ಲಕ್ಷ ಉದ್ಯೋಗ ಸೃಷ್ಠಿ!

ಸ್ಯಾಮ್‌ಸಂಗ್, ಆ್ಯಪಲ್, ಫಾಕ್ಸ್‌ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ನವದೆಹಲಿ: ಸ್ಯಾಮ್‌ಸಂಗ್, ಆ್ಯಪಲ್, ಫಾಕ್ಸ್‌ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯಡಿ ಭಾರತದಲ್ಲಿ 11.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸಲಾಗುವುದು. ಇದಕ್ಕಾಗಿ 22 ಕಂಪನಿಗಳು ಅರ್ಜಿ ಸಲ್ಲಿಸಿದ್ದು ಅದರಲ್ಲಿ 7 ಲಕ್ಷ ಕೋಟಿ ಮೌಲ್ಯದ ಉತ್ಪನ್ನಗಳನ್ನು ರಫ್ತು ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರವಿಶಂಕರ್ ಪ್ರಸಾದ್ ಈ ಕಂಪನಿಗಳು ಮೂರು ಲಕ್ಷ ನೇರ ಮತ್ತು ಸುಮಾರು ಒಂಬತ್ತು ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದರು. ಆದರೆ ಇದೇ ವೇಳೆ ಈ ಯೋಜನೆ ಯಾವುದೇ ದೇಶದ ವಿರುದ್ಧವಾಗಿಲ್ಲ. ಇದು ಭಾರತ ಸಕಾರಾತ್ಮಕವಾಗಿದೆ ಎಂದು ಹೇಳುವ ಯೋಜನೆಯಾಗಿದೆ.  "ನಾನು ಯಾವುದೇ ದೇಶದ ಹೆಸರನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ನಮ್ಮ ಭದ್ರತೆ, ಗಡಿರೇಖೆಯ ದೇಶಗಳಿಗೆ ಸಂಬಂಧಿಸಿದಂತೆ ನಮಗೆ ನಮ್ಮದೇ ನಿಯಮಾವಳಿಗಳಿದೆ" 

"ನಾವು ಆಶಾವಾದಿಯಾಗಿದ್ದೇವೆ ಮತ್ತು ನಮ್ಮ ವ್ಯಾಲ್ಯೂ ಚೈನ್ ಮೂಲಕ  ಜಾಗತಿಕ ವ್ಯಾಲ್ಯೂ ಚೈನ್ ಜತೆಗೆ ಸಂಒಅರ್ಕ ಸಾಧಿಸಲು ಚಿಂತನ ನಡೆಸಿದ್ದೇವೆ. ಇದರಿಂದಾಗಿ ದೇಶದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನಾ ವಾತಾವರಣವನ್ನು ಬಲಪಡಿಸುತ್ತೇವೆ" ಎಂದು ಅವರು ಹೇಳಿದರು. ಜಾಗತಿಕ ಮತ್ತು ದೇಶೀಯ ಮೊಬೈಲ್ ಫೋನ್ ಉತ್ಪಾದನಾ ಕಂಪನಿಗಳು ಮತ್ತು ಎಲೆಕ್ಟ್ರಾನಿಕ್ ಘಟಕಗಳ ತಯಾರಕರಿಂದ ಪಡೆದ ಅರ್ಜಿಗಳ ವಿಷಯದಲ್ಲಿ ಪಿಎಲ್ಐ ಯೋಜನೆ ಭಾರಿ ಯಶಸ್ಸನ್ನು ಕಂಡಿದೆ ಎಂದು ಪ್ರಸಾದ್ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT