ರವಿಶಂಕರ್ ಪ್ರಸಾದ್ 
ವಾಣಿಜ್ಯ

ಭಾರತದಲ್ಲೇ ಮೊಬೈಲ್ ತಯಾರಿಕೆಗೆ ಕಂಪನಿಗಳ ದುಂಬಾಲು, 3 ಲಕ್ಷ ಉದ್ಯೋಗ ಸೃಷ್ಠಿ!

ಸ್ಯಾಮ್‌ಸಂಗ್, ಆ್ಯಪಲ್, ಫಾಕ್ಸ್‌ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ನವದೆಹಲಿ: ಸ್ಯಾಮ್‌ಸಂಗ್, ಆ್ಯಪಲ್, ಫಾಕ್ಸ್‌ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯಡಿ ಭಾರತದಲ್ಲಿ 11.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸಲಾಗುವುದು. ಇದಕ್ಕಾಗಿ 22 ಕಂಪನಿಗಳು ಅರ್ಜಿ ಸಲ್ಲಿಸಿದ್ದು ಅದರಲ್ಲಿ 7 ಲಕ್ಷ ಕೋಟಿ ಮೌಲ್ಯದ ಉತ್ಪನ್ನಗಳನ್ನು ರಫ್ತು ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರವಿಶಂಕರ್ ಪ್ರಸಾದ್ ಈ ಕಂಪನಿಗಳು ಮೂರು ಲಕ್ಷ ನೇರ ಮತ್ತು ಸುಮಾರು ಒಂಬತ್ತು ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದರು. ಆದರೆ ಇದೇ ವೇಳೆ ಈ ಯೋಜನೆ ಯಾವುದೇ ದೇಶದ ವಿರುದ್ಧವಾಗಿಲ್ಲ. ಇದು ಭಾರತ ಸಕಾರಾತ್ಮಕವಾಗಿದೆ ಎಂದು ಹೇಳುವ ಯೋಜನೆಯಾಗಿದೆ.  "ನಾನು ಯಾವುದೇ ದೇಶದ ಹೆಸರನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ನಮ್ಮ ಭದ್ರತೆ, ಗಡಿರೇಖೆಯ ದೇಶಗಳಿಗೆ ಸಂಬಂಧಿಸಿದಂತೆ ನಮಗೆ ನಮ್ಮದೇ ನಿಯಮಾವಳಿಗಳಿದೆ" 

"ನಾವು ಆಶಾವಾದಿಯಾಗಿದ್ದೇವೆ ಮತ್ತು ನಮ್ಮ ವ್ಯಾಲ್ಯೂ ಚೈನ್ ಮೂಲಕ  ಜಾಗತಿಕ ವ್ಯಾಲ್ಯೂ ಚೈನ್ ಜತೆಗೆ ಸಂಒಅರ್ಕ ಸಾಧಿಸಲು ಚಿಂತನ ನಡೆಸಿದ್ದೇವೆ. ಇದರಿಂದಾಗಿ ದೇಶದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನಾ ವಾತಾವರಣವನ್ನು ಬಲಪಡಿಸುತ್ತೇವೆ" ಎಂದು ಅವರು ಹೇಳಿದರು. ಜಾಗತಿಕ ಮತ್ತು ದೇಶೀಯ ಮೊಬೈಲ್ ಫೋನ್ ಉತ್ಪಾದನಾ ಕಂಪನಿಗಳು ಮತ್ತು ಎಲೆಕ್ಟ್ರಾನಿಕ್ ಘಟಕಗಳ ತಯಾರಕರಿಂದ ಪಡೆದ ಅರ್ಜಿಗಳ ವಿಷಯದಲ್ಲಿ ಪಿಎಲ್ಐ ಯೋಜನೆ ಭಾರಿ ಯಶಸ್ಸನ್ನು ಕಂಡಿದೆ ಎಂದು ಪ್ರಸಾದ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!