ಪ್ರಧಾನಿ ಮೋದಿ ಉದ್ಘಾಟನೆ 
ವಾಣಿಜ್ಯ

ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಉತ್ತೇಜನ: ಪಾರದರ್ಶಕ ತೆರಿಗೆ ವೇದಿಕೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ 'ಪಾರದರ್ಶಕ ತೆರಿಗೆ- ಪ್ರಾಮಾಣಿಕರಿಗೆ ಗೌರವ' ವೇದಿಕೆಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. 

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ 'ಪಾರದರ್ಶಕ ತೆರಿಗೆ- ಪ್ರಾಮಾಣಿಕರಿಗೆ ಗೌರವ' ವೇದಿಕೆಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. 

ನಂತರ ಮಾತನಾಡಿದ ಅವರು, ಪ್ರಾಮಾಣಿಕರನ್ನು ಗೌರವಿಸುವ ನಮ್ಮ ಹೊಸ ಪ್ರಯಾಣ ಇಂದು ಆರಂಭವಾಗುತ್ತಿದೆ. ದೇಶದ ಬೆಳವಣಿಗೆಯಲ್ಲಿ ಪ್ರಾಮಾಣಿಕವಾಗಿ ಪಾರದರ್ಶಕವಾಗಿ ತೆರಿಗೆ ಪಾವತಿ ಮಾಡುವವರು ಬಹಳ ದೊಡ್ಡ ಪಾತ್ರ ವಹಿಸುತ್ತಾರೆ ಎಂದರು.

ತೆರಿಗೆ ಪಾವತಿದಾರರು ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮಧ್ಯೆ ಯಾರ ಮಧ್ಯ ಪ್ರವೇಶವಿಲ್ಲದೆ,ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ತೆರಿಗೆ ಪಾವತಿ, ಕುಂದುಕೊರತೆಗಳ ನಿವಾರಣೆ, ವಹಿವಾಟು ನಡೆಯಲಿದೆ. ಈ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯ ಫೇಸ್ ಲೆಸ್ ಅಸ್ಸೆಸ್ಸ್ ಮೆಂಟ್ ಮತ್ತು ಟ್ಯಾಕ್ಸ್ ಚಾರ್ಟರ್ ಇಂದಿನಿಂದ ಜಾರಿಗೆ ಬರಲಿದೆ. ಫೇಸ್ ಲೆಸ್ ಅಪೀಲ್ ಸೆಪ್ಟೆಂಬರ್ 25ರಿಂದ ಲಭ್ಯವಾಗಲಿದೆ ಎಂದು ಪ್ರಧಾನಿ ತಿಳಿಸಿದರು.

ಭಾರತೀಯ ತೆರಿಗೆ ವ್ಯವಸ್ಥೆಯಲ್ಲಿ ಹೊಸ ಮೂಲಭೂತ ಸುಧಾರಣೆಗಳಾಗಲಿದ್ದು ತೆರಿಗೆ ವ್ಯವಸ್ಥೆಯನ್ನು ತಡೆರಹಿತವಾಗಿ, ಯಾವುದೇ ಪ್ರಯಾಸಗಳಿಲ್ಲದೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ನೇರ ತೆರಿಗೆ ಪಾವತಿಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪಾರದರ್ಶಕ ತೆರಿಗೆ ವೇದಿಕೆಗೆ ಚಾಲನೆ ನೀಡಲಾಗಿದ್ದು, ಇದರಿಂದ ಪ್ರಾಮಾಣಿಕ ತೆರಿಗೆದಾರರಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶದಲ್ಲಿ ತೆರಿಗೆದಾರರಿಗೆ ಹೊಸ ಪದ್ಧತಿ ಜಾರಿ ಮಾಡಿದ್ದೇವೆ. ದೇಶದಲ್ಲಿ ಹಲವಾರು ಬದಲಾವಣೆಯಾಗುತ್ತಿದೆ. ತೆರಿಗೆ ನೀತಿಯಲ್ಲೂ ಮಹತ್ತರ ಬದಲಾವಣೆ ಮಾಡಲಾಗಿದೆ ಎಂದರು.

ಕಳೆದ ಆರು ವರ್ಷಗಳ ಎನ್ ಡಿಎ ಸರ್ಕಾರ ಆಡಳಿತದಲ್ಲಿ ಬ್ಯಾಂಕಿಂಗ್ ನ್ನು ಅನ್ ಬ್ಯಾಂಕಿಂಗ್ ಮಾಡುವುದು. ಅಸುರಕ್ಷಿತರನ್ನು ಸುರಕ್ಷಿತಗೊಳಿಸುವುದು, ಹೂಡಿಕೆ ಇಲ್ಲದೆಡೆ ಹೂಡಿಕೆ ಮಾಡುವುದರ ಬಗ್ಗೆ ನಾವು ಗಮನ ಹರಿಸಿದ್ದೇವೆ. ಕಳೆದ ಆರು ವರ್ಷಗಳಲ್ಲಿ ತೆರಿಗೆ ಆಡಳಿತದಲ್ಲಿ ಹೊಸ ಆಡಳಿತ ಮಾದರಿಗೆ ಭಾರತ ಸಾಕ್ಷಿಯಾಗಿದೆ. ನಾವು ತೆರಿಗೆ ಪಾವತಿಯಲ್ಲಿನ ಕ್ಷಿಷ್ಟತೆ, ವ್ಯಾಜ್ಯಗಳನ್ನು ಕಡಿಮೆ ಮಾಡಿ ಪಾರದರ್ಶಕತೆ, ತೆರಿಗೆ ಪಾಲನೆ ಮತ್ತು ತೆರಿಗೆ ಪಾವತಿದಾರರ ನಂಬಿಕೆ ಹೆಚ್ಚಿಸಿದ್ದೇವೆ ಎಂದರು. 

ಇದಕ್ಕೂ ಮುನ್ನ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪಾರದರ್ಶಕ ವ್ಯವಸ್ಥೆಯನ್ನು ಪರಿಚಯಿಸುವುದರ ಜೊತೆಗೆ ತೆರಿಗೆದಾರರ ಸುಧಾರಣೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಆದಾಯ ತೆರಿಗೆ ಇಲಾಖೆಯು ಹೊಣೆಗಾರಿಕೆಯನ್ನು ಒದಗಿಸುವುದಕ್ಕಾಗಿ ಡಾಕ್ಯುಮೆಂಟ್ ಐಡೆಂಟಿಫಿಕೇಶನ್ ನಂಬರ್(ಡಿಐಎನ್) ಪರಿಚಯಿಸಲಿದೆ. ಇದು ಎಲ್ಲ ರೀತಿಯ ಸಂವಹನಕ್ಕಾಗಿದ್ದು ಡಿಐಎನ್ ಇಲ್ಲದೆ ಐಟಿ ಇಲಾಖೆಯಿಂದ ನೀಡುವ ದಾಖಲೆಗಳು ಅಮಾನ್ಯವಾಗಿರುತ್ತದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT