ಸಾಂದರ್ಭಿಕ ಚಿತ್ರ 
ವಾಣಿಜ್ಯ

ವ್ಯಾಪಾರ-ವಹಿವಾಟು ಅಲ್ಪ ಚೇತರಿಕೆ: ನವೆಂಬರ್ ನಲ್ಲಿ 1.04 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಕೊರೋನಾ ಸೋಂಕಿನ ಭೀತಿಯ ನಂತರ ಆನ್ ಲಾಕ್ ಮಾರ್ಗಸೂಚಿಯಂತೆ ದೇಶದಲ್ಲಿ ವ್ಯಾಪಾರ ವಹಿವಾಟು ಕೊಂಚ ಚೇತರಿಸಿಕೊಂಡಿದೆ.

ನವದೆಹಲಿ: ಕೊರೋನಾ ಸೋಂಕಿನ ಭೀತಿಯ ನಂತರ ಆನ್ ಲಾಕ್ ಮಾರ್ಗಸೂಚಿಯಂತೆ ದೇಶದಲ್ಲಿ ವ್ಯಾಪಾರ ವಹಿವಾಟು ಕೊಂಚ ಚೇತರಿಸಿಕೊಂಡಿದೆ. ಇದರಿಂದಾಗಿ ನವೆಂಬರ್ ಒಂದೇ ತಿಂಗಳಿನಲ್ಲಿ 1,04,963 ಕೋಟಿ ರೂ. ಜಿಎಸ್ ಟಿ ತೆರಿಗೆ ಸಂಗ್ರಹವಾಗಿರುವುದಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇಕಡ 1.42 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಸಕ್ತ ವರ್ಷದ ನವೆಂಬರ್ ತಿಂಗಳಲ್ಲಿ ಒಟ್ಟಾರೆಯಾಗಿ 1,04,963 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿದೆ.

ಇದರಲ್ಲಿ ಕೇಂದ್ರ ಜಿಎಸ್‌ಟಿ 19,189 ಕೋಟಿ ರೂ., ರಾಜ್ಯ ಜಿಎಸ್‌ಟಿ 25,540 ಕೋಟಿ ರೂ., ಐಜಿಎಸ್‌ಟಿ 51,992 ಕೋಟಿ (ಸರಕುಗಳ ಆಮದಿನಿಂದ ಸಂಗ್ರಹಿಸಿದ 22,078 ಕೋಟಿ ರೂ.ಸೇರಿದಂತೆ) ಮತ್ತು ಸೆಸ್, 8,242 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 9 809 ಕೋಟಿ ಸೇರಿದಂತೆ) ಗಳಾಗಿದೆ. 2020 ರ ನವೆಂಬರ್ 30 ರವರೆಗೆ ನವೆಂಬರ್ ತಿಂಗಳಿಗೆ ಸಲ್ಲಿಸಲಾದ ಒಟ್ಟು ಜಿಎಸ್‌ಟಿಆರ್ -3 ಬಿ ರಿಟರ್ನ್ಸ್ ಸಂಖ್ಯೆ 82 ಲಕ್ಷವಾಗಿದೆ.

ಕೇಂದ್ರ ಜಿಎಸ್‌ಟಿಗೆ 22,293 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 16,286 ಕೋಟಿ ರೂ.ಗಳನ್ನು ಐಜಿಎಸ್‌ಟಿಯಿಂದ ನಿಯಮಿತ ಇತ್ಯರ್ಥವಾಗಿ ಸರ್ಕಾರ ಇತ್ಯರ್ಥಪಡಿಸಿದೆ. 2020 ರ ನವೆಂಬರ್ ತಿಂಗಳಲ್ಲಿ ನಿಯಮಿತ ಇತ್ಯರ್ಥದ ನಂತರ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗಳಿಸಿದ ಒಟ್ಟು ಆದಾಯ ಕೇಂದ್ರ ಜಿಎಸ್‌ಟಿಗೆ 41,482 ಕೋಟಿ ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 41,826 ಕೋಟಿ ರೂ. ಗಳಾಗಿದೆ.

ಜಿಎಸ್‌ಟಿ ಆದಾಯದಲ್ಲಿನ ಇತ್ತೀಚಿನ ಚೇತರಿಕೆಯ ಪ್ರವೃತ್ತಿಗೆ ಅನುಗುಣವಾಗಿ, 2020 ರ ನವೆಂಬರ್ ತಿಂಗಳ ಆದಾಯವು ಕಳೆದ ವರ್ಷದ ಇದೇ ತಿಂಗಳಲ್ಲಿ ಜಿಎಸ್‌ಟಿ ಆದಾಯಕ್ಕಿಂತ ಶೇ.1.4 ರಷ್ಟು ಹೆಚ್ಚಾಗಿದೆ. ಕಳೆದ ವರ್ಷದ ಇದೇ ತಿಂಗಳಲ್ಲಿ ಬಂದ ಆದಾಯಕ್ಕೆ ಹೋಲಿಸಿದರೆ ಈ ತಿಂಗಳಲ್ಲಿ, ಸರಕುಗಳ ಆಮದಿನಿಂದ ಬರುವ ಆದಾಯವು ಶೇ. 4.9 ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವು ಶೇ. 0.5 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT