ರಾಜೀವ್ ಕುಮಾರ್ 
ವಾಣಿಜ್ಯ

4ನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಸಕಾರಾತ್ಮಕವಾಗಿರಲಿದೆ: ನೀತಿ ಆಯೋಗದ ಉಪಾಧ್ಯಕ್ಷ

ಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಕೇಂದ್ರದ ಹೊಸ ಕೃಷಿ ಸುಧಾರಣಾ ಕಾನೂನುಗಳು ರೈತರ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಆದರೆ ತಪ್ಪು ತಿಳುವಳಿಕೆ ಮತ್ತು ತಪ್ಪು ಸಂವಹನದ ಪರಿಣಾಮ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ರಾಜೀವ್ ಕುಮಾರ್ ಅವರು ತಿಳಿಸಿದ್ದಾರೆ.

ಎರಡನೇ ತ್ರೈಮಾಸಿಕದ ಜಿಡಿಪಿ ಅಂಕಿ(ಶೇಕಡಾ 7.5 ರಷ್ಟು ಬೆಳವಣಿಗೆ) ಅಂಶವನ್ನು ಗಮನಿಸಿದರೆ ಈ ಸಾಂಕ್ರಾಮಿಕ-ಪ್ರೇರಿತ ಆರ್ಥಿಕ ಸಂಕಷ್ಟದಿಂದ ದೇಶ ಹೊರಬರುತ್ತಿದೆ ಎಂಬುದನ್ನು ತೋರಿಸುತ್ತದೆ. ಮೂರನೇ ತ್ರೈಮಾಸಿಕದಲ್ಲಿ ನಾವು ವರ್ಷದ ಹಿಂದಿನ ಆರ್ಥಿಕ ಚಟುವಟಿಕೆಯನ್ನು ಸಾಧಿಸುತ್ತೇವೆ ಎಂಬುದು ತಮ್ಮ ನಿರೀಕ್ಷೆ ಎಂದಿದ್ದಾರೆ.

ಕೋವಿಡ್ ಸಾಂಕ್ರಾಮಿಕವು ಆರ್ಥಿಕ ಚಟುವಟಿಕೆಗಳ ಮೇಲೆ ಅಭೂತಪೂರ್ವ ಪರಿಣಾಮ ಬೀರಿದೆ. ಆದರೆ ಇದು ಸಂಪೂರ್ಣವಾಗಿ ನೈಸರ್ಗಿಕ ವಿಪತ್ತಿನ ಸ್ವರೂಪದಲ್ಲಿದೆ ಮತ್ತು ಸಾಮಾನ್ಯ ಆರ್ಥಿಕ ಚಕ್ರಕ್ಕೆ ಸಂಬಂಧಿಸಿದ್ದಲ್ಲ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT