ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ 
ವಾಣಿಜ್ಯ

ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.4, ರಿವರ್ಸ್ ರೆಪೊ ದರ ಶೇ.3.35ರ ಯಥಾಸ್ಥಿತಿ ಮುಂದುವರಿಕೆ 

ತೀವ್ರ ಹಣದುಬ್ಬರದ ಪರಿಸ್ಥಿತಿ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ರೆಪೊ ದರದಲ್ಲಿ ಯಥಾಸ್ಥಿತಿಯನ್ನು ಸತತ ಮೂರನೇ ಬಾರಿ  ಕಾಯ್ದುಕೊಂಡಿದ್ದು, ಶೇಕಡಾ 4ರಷ್ಟು ಇರಲಿದೆ.

ನವದೆಹಲಿ: ತೀವ್ರ ಹಣದುಬ್ಬರದ ಪರಿಸ್ಥಿತಿ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ರೆಪೊ ದರದಲ್ಲಿ ಯಥಾಸ್ಥಿತಿಯನ್ನು ಸತತ ಮೂರನೇ ಬಾರಿ  ಕಾಯ್ದುಕೊಂಡಿದ್ದು, ಶೇಕಡಾ 4ರಷ್ಟು ಇರಲಿದೆ. ಇಂದು ತ್ರೈಮಾಸಿಕದ ವಿತ್ತೀಯ ನೀತಿ ಪ್ರಕಟಿಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ರಿವರ್ಸ್ ರೆಪೊ ದರವನ್ನು ಸಹ ಬದಲಾವಣೆ ಮಾಡದೆ ಶೇಕಡಾ 3.35ರಷ್ಟು ಯಥಾಸ್ಥಿತಿ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಕಳೆದ ಮಾರ್ಚ್ ತಿಂಗಳಿನಿಂದ ಆರ್ ಬಿಐ 115 ಬೇಸಿಸ್ ಪಾಯಿಂಟ್ ಗಳಷ್ಟು ರೆಪೊ ದರವನ್ನು ಕಡಿತ ಮಾಡಿತ್ತು.ಕಳೆದ ಮೇ 22ರಂದು ಆರ್ ಬಿಐ ತನ್ನ ವಿತ್ತೀಯ ನೀತಿಯನ್ನು ಪರಿಷ್ಕರಿಸಿತ್ತು. 

ಕೋವಿಡ್-19 ಆರ್ಥಿಕ ಕುಸಿತ, ಅಧಿಕ ಹಣದುಬ್ಬರ, ವಿತ್ತೀಯ ದೇಶೀ ಉತ್ಪಾದನೆಗಳ(ಜಿಡಿಪಿ) ಕುಸಿತದಿಂದಾಗಿ ಬಹುತೇಕ ಆರ್ಥಿಕ ತಜ್ಞರು ಈ ಬಾರಿ ಕೂಡ ರೆಪೊ ದರ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ಬದಲಾವಣೆಯಾಗದೆ ಯಥಾಸ್ಥಿತಿ ಮುಂದುವರಿಯಬಹುದು ಎಂದು ಹೇಳಿತ್ತು. 

ಆರ್ ಬಿಐ, ಜಿಡಿಪಿ ಬೆಳವಣಿಗೆಯನ್ನು 2020-21ನೇ ಆರ್ಥಿಕ ಸಾಲಿನಲ್ಲಿ ಶೇಕಡಾ 9.5ರಿಂದ ಶೇಕಡಾ 7.5ರಷ್ಟಾಗಬಹುದು ಎಂದು ಹೇಳಿದೆ. ಈ ವರ್ಷದ ಮಾರ್ಚ್ ಹೊರತುಪಡಿಸಿ ಪ್ರತಿ ತಿಂಗಳು ಆರ್‌ಬಿಐ ಕಡ್ಡಾಯವಾಗಿ ಶೇಕಡಾ 2-6 ರಷ್ಟು ಗುರಿ ವ್ಯಾಪ್ತಿಯ ಮೇಲೆ ಹಣದುಬ್ಬರವು ಸ್ಥಿರವಾಗಿ ಉಳಿದಿದೆ, ಆದರೆ ಪ್ರಮುಖ ಹಣದುಬ್ಬರವು ಸಹ ಹೆಚ್ಚಾಗಿದೆ. 

ರೆಪೊ ದರ: ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಕೇಂದ್ರ ಬ್ಯಾಂಕಿನಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ: ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT