ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಎನ್‌ಪಿಎ ಬಿಕ್ಕಟ್ಟನ್ನು ಸೃಷ್ಟಿಸಿದವರಿಂದ ನಾವೇನೂ ಕಲಿಯಬೇಕಿಲ್ಲ: ಚಿದಂಬರಂಗೆ ವಿತ್ತ ಸಚಿವೆ ತಿರುಗೇಟು

 ಅವಳಿ ಬ್ಯಾಲೆನ್ಸ್ ಶಿಟ್ ಬಿಕ್ಕಟ್ಟಿನೊಡನೆ ಪರ್ವತ ಶಿಖರದಷ್ಟು ಎನ್‌ಪಿಎಯನ್ನು ನೀಡಿದವರಿಂದ ನಾವು ಕಲಿಯಬೇಕಾಗಿರುವುದು ಏನೂ ಇಲ್ಲ ಎಂದು  ಹಣಕಾಸು ಸಚಿವೆ ನಿರ್ಮಲಾ  ಸೀತಾರಾಮನ್ಹೇಳಿದ್ದಾರೆ. ಈ ಮೂಲಕ ಅವರು ಮಾಜಿ ಕೇಂದ್ರ ವಿತ್ತ ಸಚಿವ ಪಿ. ಚಿದಂಬರಂ ಅವರ ಆರ್ಥಿಕ ನೀತಿಗಳನ್ನು ಕುಟುಕಿದ್ದಾರೆ.

ನವದೆಹಲಿ: ಅವಳಿ ಬ್ಯಾಲೆನ್ಸ್ ಶಿಟ್ ಬಿಕ್ಕಟ್ಟಿನೊಡನೆ ಪರ್ವತ ಶಿಖರದಷ್ಟು ಎನ್‌ಪಿಎಯನ್ನು ನೀಡಿದವರಿಂದ ನಾವು ಕಲಿಯಬೇಕಾಗಿರುವುದು ಏನೂ ಇಲ್ಲ ಎಂದು  ಹಣಕಾಸು ಸಚಿವೆ ನಿರ್ಮಲಾ  ಸೀತಾರಾಮನ್ಹೇಳಿದ್ದಾರೆ. ಈ ಮೂಲಕ ಅವರು ಮಾಜಿ ಕೇಂದ್ರ ವಿತ್ತ ಸಚಿವ ಪಿ. ಚಿದಂಬರಂ ಅವರ ಆರ್ಥಿಕ ನೀತಿಗಳನ್ನು ಕುಟುಕಿದ್ದಾರೆ.

ರಾಜ್ಯಸಭೆಯಲ್ಲಿ 2020-21ರ ಬಜೆಟ್ ಕುರಿತ ಚರ್ಚೆಗೆ ಉತ್ತರಿಸಿದ ಅವರು "2012-13ರಲ್ಲಿ ಸಮರ್ಥ ವೈದ್ಯರ ಮಾರ್ಗದರ್ಶನದೊಡನೆ ಎಫ್‌ಡಿಐ  ದೇಶದಿಂದಲೇ ಓಟಕ್ಕಿತ್ತಿತ್ತು" ಎಂದರು. ಅಲ್ಲದೆ ಭಾರತದ ರಕ್ಷಣೆ ಪಾರ್ಶ್ವವಾಯುವಿಗೆ ತುತ್ತಾಗಿತ್ತು, ಆದರೆ ಯುಪಿಎ ಸರ್ಕಾರದಲ್ಲಿ ಅದನ್ನು ನಿಭಾಯಿಸುವ ಉಪಕರಣಗಳಿರಲಿಲ್ಲ ಎಂದಿದ್ದಾರೆ.

ಚಿದಂಬರಂ ಅವರ ಟೀಕೆಗಳಲ್ಲಿ ವಿಷಯಗಳಿಗಿಂತ ಹೆಚ್ಚು ವ್ಯಂಗ್ಯವಿದೆ ಎಂದು ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು."ಯುಪಿಎಯ ತಪ್ಪುಗಳನ್ನು ಪುನರಾವರ್ತಿಸದ ನಾವು ಖಚಿತವಾಗಿ ಮುಂದಿದ್ದೇವೆ"

ಬ್ಯಾಂಕುಗಳು ಎದುರಿಸುತ್ತಿರುವ ಅವಳಿ ಬ್ಯಾಲೆನ್ಸ್ ಶೀಟ್ ಬಿಕ್ಕಟ್ಟು ಮತ್ತು ಹೆಚ್ಚುತ್ತಿರುವ ಎನ್‌ಪಿಎ ಮತ್ತು ಪರಾರಿಯಾಗುವ ಆರ್ಥಿಕ ಅಪರಾಧಿಗಳ ಪಟ್ಟಿಯನ್ನು ಸಹ ಸೀತಾರಾಮನ್ ಪಟ್ಟಿ ಮಾಡಿದ್ದರು.ಅಲ್ಲದೆ, ಯುಪಿಎ ಜಾರಿಗೆ ತಂದ ಮುಕ್ತ ವ್ಯಾಪಾರ ಒಪ್ಪಂದಗಳು (ಎಫ್‌ಟಿಎ) ದೇಶಕ್ಕೆ ಮಾರಕವಾಗಿದೆ ಎಂದು ಅವರು ಹೇಳಿದ್ದಾರೆ.

ಕೈಗಾರಿಕಾ ವಲಯ ಇದೀಗ ಚೇತರಿಕೆಯನ್ನು ತೋರಿಸುತ್ತಿದೆ.ಚಿಗುರುಗಳು ಗೋಚರಿಸುತ್ತಿವೆ ಮತ್ತು ಪ್ರಸಕ್ತ ಹಣಕಾಸು ವರ್ಷದ ಆರು ತಿಂಗಳಲ್ಲಿ ಜಿಎಸ್ಟಿ ಸಂಗ್ರಹವು 1 ಲಕ್ಷ ಕೋಟಿ ರೂ. ದಾಟಿದೆ ಎಂದರು

ಮೋದಿ ಸರ್ಕಾರದ ಅಡಿಯಲ್ಲಿ ಆಹಾರ ಹಣದುಬ್ಬರವನ್ನು ನಿಯಂತ್ರಣದಲ್ಲಿರಿಸಲಾಗಿದ್ದು  ಹಣಕಾಸಿನ ವ್ಯವಹಾರ ಶಿಸ್ತುಬದ್ದವಾಗಿದೆಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT