ಸಾಂದರ್ಭಿಕ ಚಿತ್ರ 
ವಾಣಿಜ್ಯ

'ಸುಪ್ರೀಂ' ಚಾಟಿ ನಂತರ ರಾತ್ರಿ 12 ಗಂಟೆಯೊಳಗೆ ಬಾಕಿ ಹಣ ಪಾವತಿಸುವಂತೆ ಟೆಲಿಕಾಂ ಕಂಪನಿಗಳಿಗೆ ಡಿಒಟಿ ಆದೇಶ

ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದ್ದಂತೆ ಎಚ್ಚೆತ್ತುಕೊಂಡ ಟೆಲಿಕಮ್ಯುನಿಕೇಷನ್ ಇಲಾಖೆ(ಡಿಒಟಿ), ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ(ಎಜಿಆರ್‌) ₹1.47 ಲಕ್ಷ ಕೋಟಿ ರೂ. ಅನ್ನು ಇಂದು ರಾತ್ರಿ 12 ಗಂಟೆಯೊಳಗೇ ಪಾವತಿಸುವಂತೆ ದೇಶದ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ.

ನವದೆಹಲಿ: ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದ್ದಂತೆ ಎಚ್ಚೆತ್ತುಕೊಂಡ ಟೆಲಿಕಮ್ಯುನಿಕೇಷನ್ ಇಲಾಖೆ(ಡಿಒಟಿ), ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ(ಎಜಿಆರ್‌) ₹1.47 ಲಕ್ಷ ಕೋಟಿ ರೂ. ಅನ್ನು ಇಂದು ರಾತ್ರಿ 12 ಗಂಟೆಯೊಳಗೇ ಪಾವತಿಸುವಂತೆ ದೇಶದ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ.

ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿ ಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ(ಎಜಿಆರ್‌)ದ ಹಣ ಪಾವತಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಸುಪ್ರೀಂ ಕೋರ್ಟ್ ಆದೇಶವನ್ನೇ ತಡೆ ಹಿಡಿದಿದ್ದ ಕೇಂದ್ರ ಟೆಲಿಕಮ್ಯುನಿಕೇಷನ್ ಇಲಾಖೆಯನ್ನು ಸರ್ವೋಚ್ಛ ನ್ಯಾಯಾಲಯ ಇಂದು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಎಚ್ಚೆತ್ತುಕೊಂಡ ಡಿಒಟಿ, ಇಂದು ಮಧ್ಯರಾತ್ರಿಯೊಳಗೆ ಬಾಕಿ ಪಾವತಿಸುವಂತೆ ಭಾರತಿ ಏರ್ಟೆಲ್ ಹಾಗೂ ವೊಡಾಫೋನ್ ಗೆ ಆದೇಶಿಸಿದೆ.

ವೊಡಾಫೋನ್ ಐಡಿಯಾ 50 ಸಾವಿರ ಕೋಟಿ, ಭಾರತಿ ಏರ್ಟೆಲ್ 35,586 ಕೋಟಿ ಹಾಗೂ ತನ್ನ ವ್ಯವಹಾರವನ್ನುಏರ್ಟೆಲ್ ಗೆ ಮಾರಾಟ ಮಾಡಿರುವ ಟಾಟಾ ಟೆಲೆ ಸರ್ವಿಸಸ್ 14 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದಾರೆ.

ಈ ಮಧ್ಯೆ, 2019ರ ಅಕ್ಟೋಬರ್‌ನಲ್ಲಿ ಸರ್ಕಾರಕ್ಕೆ ಬಾಕಿ ಇರುವ ಶುಲ್ಕ ಪಾವತಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಮರು ಪರಿಶೀಲಿಸುವಂತೆ ಕೋರಿ ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್‌ ಐಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಜನವರಿ 16ರಂದು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಅಲ್ಲದೆ ಜನವರಿ 23ರೊಳಗೆ ಬಡ್ಡಿ ಹಾಗೂ ದಂಡ ಸಹಿತ ಬಾಕಿ ಮೊತ್ತ ಪಾವತಿಸುವಂತೆ ಸೂಚಿಸಿತ್ತು.

ಸರ್ಕಾರಕ್ಕೆ ದೂರಸಂಪರ್ಕ ಕಂಪನಿಗಳು ಪರವಾನಗಿ ಶುಲ್ಕ ₹92,642 ಕೋಟಿ ಹಾಗೂ ತರಂಗಾಂತರಗಳ ಬಳಕೆ ಶುಲ್ಕ ₹55,054 ಕೋಟಿ ಬಾಕಿ ಇರುವುದಾಗಿ ಸಚಿವ ರವಿಶಂಕರ್‌ ಪ್ರಸಾದ್‌ ಲೋಕಸಭೆಗೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT