ಜಿಎಸ್ಟಿ 
ವಾಣಿಜ್ಯ

ಮತ್ತೆ ಕರ್ನಾಟಕಕ್ಕೆ ಜಿಎಸ್ಟಿ ಪರಿಹಾರ ವಿಳಂಬ, ಆತಂಕ ವ್ಯಕ್ತಪಡಿಸಿದ ಅಧಿಕಾರಿಗಳು!

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಬೆಂಗಳೂರು: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಇನ್ನು ಡಿಸೆಂಬರ್-ಜನವರಿಯ ಪರಿಹಾರ ಮೊತ್ತ ಅಂದಾಜು 3,200 ಕೋಟಿ ರೂ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಪಾವತಿಸಲು ನಿರ್ಧರಿಸಲಾಗಿದೆ. ಆದರೆ ಸತತ ಪಾವತಿ ವಿಳಂಬದಿಂದಾಗಿ ರಾಜ್ಯ ತಲ್ಲಣಗೊಂಡಿದೆ. ಸಂವಹನದ ಕೊರತೆಯಿಂದಾಗಿ ಈ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. 

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಹಲವು ಪತ್ರಗಳನ್ನು ರವಾನಿಸಿದ್ದು ಸ್ವೀಕೃತಿ ಪತ್ರ ಮಾತ್ರ ಬರುತ್ತಿದ್ದು ಪರಿಹಾರ ವಿಳಂಬಕ್ಕೆ ಯಾವುದೇ ಸ್ಪಷ್ಟೀಕರಣ ಸಿಕ್ಕಿಲ್ಲ. ಈ ಬಾಕಿ ಹಣವನ್ನು ಯಾವಾಗ ಪಡೆಯಬಹುದು ಎಂಬ ಭರವಸೆ ಕೂಡ ಇಲ್ಲ ಎಂದು ರಾಜ್ಯದ ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. 

ಇನ್ನ ರಾಜ್ಯ ಸರ್ಕಾರ ಮಾರ್ಚ್ 5ರಂದು 2020-21ರ ಹಣಕಾಸು ಬಜೆಟ್ ಅನ್ನು ಮಂಡಿಸಲು ನಿರ್ಧರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT