ಜಿಎಸ್ಟಿ 
ವಾಣಿಜ್ಯ

ಮತ್ತೆ ಕರ್ನಾಟಕಕ್ಕೆ ಜಿಎಸ್ಟಿ ಪರಿಹಾರ ವಿಳಂಬ, ಆತಂಕ ವ್ಯಕ್ತಪಡಿಸಿದ ಅಧಿಕಾರಿಗಳು!

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಬೆಂಗಳೂರು: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಇನ್ನು ಡಿಸೆಂಬರ್-ಜನವರಿಯ ಪರಿಹಾರ ಮೊತ್ತ ಅಂದಾಜು 3,200 ಕೋಟಿ ರೂ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಪಾವತಿಸಲು ನಿರ್ಧರಿಸಲಾಗಿದೆ. ಆದರೆ ಸತತ ಪಾವತಿ ವಿಳಂಬದಿಂದಾಗಿ ರಾಜ್ಯ ತಲ್ಲಣಗೊಂಡಿದೆ. ಸಂವಹನದ ಕೊರತೆಯಿಂದಾಗಿ ಈ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. 

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಹಲವು ಪತ್ರಗಳನ್ನು ರವಾನಿಸಿದ್ದು ಸ್ವೀಕೃತಿ ಪತ್ರ ಮಾತ್ರ ಬರುತ್ತಿದ್ದು ಪರಿಹಾರ ವಿಳಂಬಕ್ಕೆ ಯಾವುದೇ ಸ್ಪಷ್ಟೀಕರಣ ಸಿಕ್ಕಿಲ್ಲ. ಈ ಬಾಕಿ ಹಣವನ್ನು ಯಾವಾಗ ಪಡೆಯಬಹುದು ಎಂಬ ಭರವಸೆ ಕೂಡ ಇಲ್ಲ ಎಂದು ರಾಜ್ಯದ ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. 

ಇನ್ನ ರಾಜ್ಯ ಸರ್ಕಾರ ಮಾರ್ಚ್ 5ರಂದು 2020-21ರ ಹಣಕಾಸು ಬಜೆಟ್ ಅನ್ನು ಮಂಡಿಸಲು ನಿರ್ಧರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT