ಜಿಎಸ್ಟಿ 
ವಾಣಿಜ್ಯ

ಮತ್ತೆ ಕರ್ನಾಟಕಕ್ಕೆ ಜಿಎಸ್ಟಿ ಪರಿಹಾರ ವಿಳಂಬ, ಆತಂಕ ವ್ಯಕ್ತಪಡಿಸಿದ ಅಧಿಕಾರಿಗಳು!

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಬೆಂಗಳೂರು: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಇನ್ನು ಡಿಸೆಂಬರ್-ಜನವರಿಯ ಪರಿಹಾರ ಮೊತ್ತ ಅಂದಾಜು 3,200 ಕೋಟಿ ರೂ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಪಾವತಿಸಲು ನಿರ್ಧರಿಸಲಾಗಿದೆ. ಆದರೆ ಸತತ ಪಾವತಿ ವಿಳಂಬದಿಂದಾಗಿ ರಾಜ್ಯ ತಲ್ಲಣಗೊಂಡಿದೆ. ಸಂವಹನದ ಕೊರತೆಯಿಂದಾಗಿ ಈ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. 

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಹಲವು ಪತ್ರಗಳನ್ನು ರವಾನಿಸಿದ್ದು ಸ್ವೀಕೃತಿ ಪತ್ರ ಮಾತ್ರ ಬರುತ್ತಿದ್ದು ಪರಿಹಾರ ವಿಳಂಬಕ್ಕೆ ಯಾವುದೇ ಸ್ಪಷ್ಟೀಕರಣ ಸಿಕ್ಕಿಲ್ಲ. ಈ ಬಾಕಿ ಹಣವನ್ನು ಯಾವಾಗ ಪಡೆಯಬಹುದು ಎಂಬ ಭರವಸೆ ಕೂಡ ಇಲ್ಲ ಎಂದು ರಾಜ್ಯದ ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. 

ಇನ್ನ ರಾಜ್ಯ ಸರ್ಕಾರ ಮಾರ್ಚ್ 5ರಂದು 2020-21ರ ಹಣಕಾಸು ಬಜೆಟ್ ಅನ್ನು ಮಂಡಿಸಲು ನಿರ್ಧರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT