ಏರ್ ಇಂಡಿಯಾ ವಿಮಾನ 
ವಾಣಿಜ್ಯ

ಏರ್ ಇಂಡಿಯಾ ಬಂದ್ ವದಂತಿ ಆಧಾರ ರಹಿತ: ಸಿಎಂಡಿ ಅಶ್ವಿನಿ ಲೋಹಾನಿ

ಸುಮಾರು 80 ಸಾವಿರ ಕೋಟಿ ರೂ. ಸಾಲದೊಂದಿಗೆ ಭಾರೀ ನಷ್ಟದ ಸುಳಿಗೆ ಸಿಲುಕಿರುವ ಸರ್ಕಾರಿ ಸ್ವಾಮ್ಯದ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಮುಚ್ಚಲಿದೆ ಎಂಬ ವದಂತಿಗಳು ಆಧಾರ ರಹಿತ ಎಂದು ಏರ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಅಶ್ವಿನಿ ಲೋಹಾನಿ ಅವರು ಹೇಳಿದ್ದಾರೆ.

ನವದೆಹಲಿ: ಸುಮಾರು 80 ಸಾವಿರ ಕೋಟಿ ರೂ. ಸಾಲದೊಂದಿಗೆ ಭಾರೀ ನಷ್ಟದ ಸುಳಿಗೆ ಸಿಲುಕಿರುವ ಸರ್ಕಾರಿ ಸ್ವಾಮ್ಯದ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಮುಚ್ಚಲಿದೆ ಎಂಬ ವದಂತಿಗಳು ಆಧಾರ ರಹಿತ ಎಂದು ಏರ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಅಶ್ವಿನಿ ಲೋಹಾನಿ ಅವರು ಹೇಳಿದ್ದಾರೆ.

ಒಂದು ವಾರದ ಹಿಂದಷ್ಟೇ ಏರ್ ಇಂಡಿಯಾ ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಲಾಗದು. ಆದರೆ ಸರ್ಕಾರದ ನೆರವು ಇಲ್ಲದೆ ಕಾರ್ಯಾಚರಣೆ ಮುಂದುವರೆಸುವುದು ಕಷ್ಟ ಎಂದು ಅಶ್ವಿನಿ ಲೋಹಾನಿ ಅವರು ಹೇಳಿದ್ದರು. ಇದೀಗ ಏರ್ ಇಂಡಿಯಾ ಕಾರ್ಯಾಚರಣೆ ಸ್ಥಗಿತಗೊಳಿಸಲಿದೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಅವರು, ಕಾರ್ಯಾಚರಣೆ ಮುಂದುವರೆಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.

‘ಏರ್‌ ಇಂಡಿಯಾ ತನ್ನ ಹಾರಟ ಮುಂದುವರಿಸಲಿದ್ದು, ಸೇವೆಯ ವಿಸ್ತರಣೆಯೂ ಆಗಲಿದೆ. ಪ್ರಯಾಣಿಕರು, ಕಂಪನಿಗಳು ಅಥವಾ ಏಜೆಂಟ್‌ಗಳು ಆತಂಕ ಪಡುವ ಅಗತ್ಯ ಇಲ್ಲ’ ಎಂದು ಏರ್ ಇಂಡಿಯಾ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಅಶ್ವಿನಿ ಲೋಹಾನಿ ಅವರು ಟ್ವೀಟ್‌ ಮಾಡಿದ್ದಾರೆ.

ಸುಮಾರು 80 ಸಾವಿರ ಕೋಟಿ ರು. ನಷ್ಟದ ಸುಳಿಗೆ ಸಿಲುಕಿರುವ ಏರಿಂಡಿಯಾ ವಿಮಾನ ಮಾರಾಟಕ್ಕೆ ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಹೀಗಾಗಿ ಈ ವಿಮಾನ ಸಂಸ್ಥೆಗೆ ಮತ್ತಷ್ಟು ಧನ ಸಹಾಯ ಮಾಡುವ ನಿರ್ಧಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಮತ್ತೊಂದೆಡೆ, ವಿಮಾನ ಖರೀದಿಗೆ ಯಾವುದೇ ಹೂಡಿಕೆದಾರರು ಮುಂದೆ ಬರುತ್ತಿಲ್ಲ. 2020ರ ಜೂನ್‌ವರೆಗೂ ಇದೇ ಪರಿಸ್ಥಿತಿ ಮುಂದುವರಿದರೆ, ಭಾರತ ಮೂಲದ ಅಂತಾರಾಷ್ಟ್ರೀಯ ವಿಮಾನ ಸಂಸ್ಥೆ ಜೆಟ್‌ ಏರ್‌ವೇಸ್‌(ಹಣಕಾಸು ಕೊರತೆಯಿಂದ 2019ರ ಏ.17ರಂದು ವಿಮಾನಗಳ ಹಾರಾಟ ರದ್ದು) ಗತಿಯೇ ಏರಿಂಡಿಯಾಗೂ ಬರಲಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT