ಜೆಎನ್ ಯು ಹಿಂಸಾಚಾರ: ಭಾರತದ ಉದ್ಯಮ ಸಮೂಹ ಪ್ರತಿಕ್ರಿಯಿಸಿದ್ದು ಹೀಗೆ 
ವಾಣಿಜ್ಯ

ಜೆಎನ್ ಯು ಹಿಂಸಾಚಾರ: ಭಾರತದ ಉದ್ಯಮ ಸಮೂಹ ಪ್ರತಿಕ್ರಿಯಿಸಿದ್ದು ಹೀಗೆ 

ದೆಹಲಿಯ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ವಿಶ್ವವಿದ್ಯಾನಿಲಯದಲ್ಲಿ ಸಂಭವಿಸಿರುವ ಈ ಹಿಂಸಾಚಾರದ ಕುರಿತು ಭಾರತದ ಉದ್ಯಮ ಸಮೂಹ ಪ್ರತಿಕ್ರಿಯೆ ನೀಡಿದೆ. 

ದೆಹಲಿಯ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ವಿಶ್ವವಿದ್ಯಾನಿಲಯದಲ್ಲಿ ಸಂಭವಿಸಿರುವ ಈ ಹಿಂಸಾಚಾರದ ಕುರಿತು ಭಾರತದ ಉದ್ಯಮ ಸಮೂಹ ಪ್ರತಿಕ್ರಿಯೆ ನೀಡಿದೆ. 

ಮಹಿಂದ್ರ ಸಮೂಹ ಸಂಸ್ಥೆಗಳ ಅಧ್ಯಕ್ಷ ಆನಂದ್ ಮಹಿಂದ್ರ ಜೆಎನ್ ಯು ಹಿಂಸಾಚಾರದ ಬಗ್ಗೆ ಮಾತನಾಡಿದ್ದು, ನಿಮ್ಮ ಸಿದ್ಧಾಂತ ಏನೇ ಇರಲಿ, ರಾಜಕಾರಣವೇನೇ ಇರಲಿ, ನಂಬಿಕೆಗಳೇನೇ ಇರಲಿ, ನೀವು ಭಾರತೀಯರಾಗಿದ್ದರೆ ಶಸ್ತ್ರಸಜ್ಜಿತ, ಕಾನೂನೇ ಇಲ್ಲದ ಗೂಂಡಾಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜೆಎನ್ ಯು ನಲ್ಲಿ ಹಿಂಸಾಚಾರ ನಡೆಸಿದವರನ್ನು ಪತ್ತೆ ಮಾಡಿ ಶಿಕ್ಷೆಗೊಳಪಡಿಸಬೇಕು ಎಂದು ಆನಂದ್ ಮಹಿಂದ್ರ ಹೇಳಿದ್ದಾರೆ. 

ಜೆಎನ್ ಯು ನಲ್ಲಿ ನಡೆದ ಹಿಂಸಾಚಾರ ವಿಡಿಯೋವನ್ನು ರಿಟ್ವೀಟ್ ಮಾಡಿರುವ ಕಿರಣ್ ಮಜುಮ್ದಾರ್ ಷಾ ಇದು ಅಕ್ಷಮ್ಯ. ಹಿಂಸಾಚಾರವನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮಾರಿಕೊ ಅಧ್ಯಕ್ಷ ಹರ್ಷ್‌ ಮಾರಿವಾಲಾ ಸಹ ಜೆಎನ್ ಯು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ಅಹಿಂಸೆಯ ನೆಲದಲ್ಲಿ ಇಂತಹ ಹಿಂಸಾಚಾರಗಳಿಗೆ ಸಾಕ್ಷಿಯಾಗುವುದು ಶೋಭೆ ತರುವುದಿಲ್ಲ. ಈ ಸುದ್ದಿ ತಿಳಿದು ನೋವಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT