ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸಂಧಾನ ಸಭೆ ವಿಫಲ: ಜ. 31 ರಿಂದ ಎರಡು ದಿನ ಅಖಿಲ ಭಾರತ ಬ್ಯಾಂಕ್ ಮುಷ್ಕರ

ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)  ಜನವರಿ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಹೈದರಾಬಾದ್/ನವದೆಹಲಿ: ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)  ಜನವರಿ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಇಂದು ಕೇಂದ್ರ ಕಾರ್ಮಿಕ ಸಚಿವಾಲಯದ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರ ದೆಹಲಿಯ ನಿವಾಸದಲ್ಲಿ ನಡೆದ ಸಂಧಾನ ಸಭೆಯಲ್ಲಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯದಿರುವುದರಿಂದ ಸಭೆ ವಿಫಲವಾಗಿದೆ. 

ಸಭೆಯಲ್ಲಿ ಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. 

ಯುಎಫ್ ಬಿಯು ಕಡೆಯಿಂದ ಬ್ಯಾಂಕ್ ನೌಕರರ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ(ಎಐಬಿಇಎ)ದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಯುಎನ್ಐಗೆ ತಿಳಿಸಿದ್ದಾರೆ.
  
ಶೇ. 20ರಷ್ಟು ಏರಿಕೆಯೊಂದಿಗೆ ವೇತನ ಪರಿಷ್ಕರಣೆ ಇತ್ಯರ್ಥ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಕರೆ ನೀಡಲಾಗಿರುವ  ಎರಡು ದಿನಗಳ ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.  
  
ಮುಷ್ಕರದಲ್ಲಿ ಎಐಬಿಇಎ, ಎಐಬಿಒಸಿ, ಎನ್‌ಸಿಬಿಇ, ಎಐಬಿಒಎ, ಬಿಎಫ್‌ಐ, ಐಎನ್‌ಬಿಇಎಫ್, ಐಎನ್‌ಬಿಒಸಿ, ಎನ್‌ಒಬಿಡಬ್ಲ್ಯೂ ಮತ್ತು ಎನ್ ಒಬಿಒ ಸೇರಿದಂತೆ ಒಂಬತ್ತು ಬ್ಯಾಂಕ್ ಒಕ್ಕೂಟಗಳು ಪಾಲ್ಗೊಳ್ಳಲಿವೆ. 
  
ಮುಂದಿನ ಮಾರ್ಚ್ 11 ರಿಂದ ದೇಶಾದ್ಯಂತ ಮೂರು ದಿನಗಳ ಮುಷ್ಕರ ಮತ್ತು ಬರುವ ಏಪ್ರಿಲ್ 1 ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಯುಎಫ್‌ಬಿಯು ತೀರ್ಮಾನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT