ಅರವಿಂದ್ ಕೃಷ್ಣ 
ವಾಣಿಜ್ಯ

ಅಮೆರಿಕಾದ ಮಾಹಿತಿ ತಂತ್ರಜ್ಞಾನ ದೈತ್ಯ ಐಬಿಎಂ ಸಿಇಓ ಆಗಿ ಭಾರತೀಯ ಮೂಲದ ಅರವಿಂದ ಕೃಷ್ಣ ನೇಮಕ!

ಅಮೆರಿಕಾ ಮಾಹಿತಿ ತಂತ್ರಜ್ಞಾನ ದೈತ್ಯ ಸಂಸ್ಥೆ ಐಬಿಎಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾನ್ಪುರ ಐಐಟಿಯ ಹಳೆಯ ವಿದ್ಯಾರ್ಥಿ ಅರವಿಂದ ಕೃಷ್ಣ ಅವರನ್ನು ನೇಮಕಗೊಳಿಸಲಾಗಿದೆ.

ನವದೆಹಲಿ: ಅಮೆರಿಕಾ ಮಾಹಿತಿ ತಂತ್ರಜ್ಞಾನ ದೈತ್ಯ ಸಂಸ್ಥೆ ಐಬಿಎಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾನ್ಪುರ ಐಐಟಿಯ ಹಳೆಯ ವಿದ್ಯಾರ್ಥಿ ಅರವಿಂದ ಕೃಷ್ಣ ಅವರನ್ನು ನೇಮಕಗೊಳಿಸಲಾಗಿದೆ.

ಐಬಿಎಂ ನಿರ್ದೇಶಕ ಮಂಡಳಿ ಗುರುವಾರದ ಸಭೆಯಲ್ಲಿ 57 ವರ್ಷದ ಅರವಿಂದ ಕೃಷ್ಣ ಅವರನ್ನು 2020ರ ಏಪ್ರಿಲ್ 6 ರಿಂದ ಜಾರಿಗೆ ಬರುವಂತೆ  ಮಂಡಳಿಯ ನಿರ್ದೇಶಕರನ್ನಾಗಿಯೂ ಚುನಾಯಿಸಲಾಗಿದೆ. ಐಬಿಎಂನ ಮುಂದಿನ ಮುಖ್ಯ ಕಾರ್ಯನಿರ್ವಾಹಕ  ಅಧಿಕಾರಿಯಾಗಿ ಆಯ್ಕೆಮಾಡಿರುವುದು ತಮಗೆ ರೋಮಾಂಚನದ ಜೊತೆಗೆ ಅತ್ಯಂತ ವಿನಮ್ರವನ್ನಾಗಿಸಿದೆ ಎಂದು ಅರವಿಂದ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ತಮ್ಮ ಮೇಲೆ ವಿಶ್ವಾಸ, ನಂಬಿಕೆ ಇರಿಸಿರುವ ಆಡಳಿತ ಮಂಡಳಿಗೆ ಕೃತಜ್ಞತೆ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. 

ಅಲ್ಪಾಬೆಟ್ ಗೆ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್ ಗೆ ಸತ್ಯಾ ನಾದೆಲ್ಲಾ ನಂತರ, ಅಮೆರಿಕಾದ ಮಾಹಿತಿ ತಂತ್ರಜ್ಞಾನ ದೈತ್ಯ ಸಂಸ್ಥೆ ಮುಖ್ಯಸ್ಥರಾಗಿರುವ ಅರವಿಂದ ಕೃಷ್ಣ ನೇಮಕವಾಗುವ ಮೂಲಕ ಭಾರತೀಯ ಮೂಲದ ಮೂರನೇ ವ್ಯಕ್ತಿಯಾಗಿದ್ದಾರೆ. ಪ್ರಸ್ತುತ ಕ್ಲೌಡ್ ಹಾಗೂ ಕಾಗ್ನಿಟೀವ್ ತಂತ್ರಾಂಶ ವಿಭಾಗದ ಹಿರಿಯ ಉಪಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಅರವಿಂದ ಕೃಷ್ಣ ಕಂಪನಿ ರೆಡ್ ಹ್ಯಾಟ್ ಸ್ವಾಧೀನ ಪಡಿಸಿಕೊಳ್ಳುವಲ್ಲಿನ ಪ್ರಮುಖ ರೂವಾರಿಯಾಗಿದ್ದರು. ಐಬಿಎಂನ ಮುಂದಿನ ಯುಗದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಯಾಗಲು ಅರವಿಂದ್ ಸರಿಯಾದ ವ್ಯಕ್ತಿ ಎಂದು ಐಬಿಎಂ ಅಧ್ಯಕ್ಷ ವರ್ಜೀನಿಯಾ ರೊಮೆಟ್ಟಿ ಹೇಳಿದ್ದಾರೆ.
 
ಅರವಿಂದ ಕೃಷ್ಣ ಅದ್ಬುತ ತಂತ್ರಜ್ಞ, ಕೃತಕ ಬುದ್ಧಿಮತ್ತೆ, ಕ್ಲೌಡ್, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಬ್ಲಾಕ್‌ ಚೈನ್‌ನಂತಹ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ. ಅವರು ಅದ್ಭುತ ಕಾರ್ಯಾಚರಣೆಯ ನಾಯಕರಾಗಿದ್ದು, ಭವಿಷ್ಯದ ವ್ಯವಹಾರ ರೂಪಿಸುವುದರೊಂದಿಗೆ ಇಂದು ಯಶಸ್ಸು ಸಾಧ್ಯವಾಗುತ್ತದೆ ಎಂದು ಐಬಿಎಂ ಹೇಳಿಕೆ ನೀಡಿದೆ. ಕೃಷ್ಣ ಅವರು ಇಲಿನಾಯ್ಸ್ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ,  ಡಾಕ್ಟರೇಟ್ ಹೊಂದಿದ್ದಾರೆ. ಅವರು 1990ರಲ್ಲಿ ಐಬಿಎಂ ಸೇರ್ಪಡೆಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ