ಐಟಿ ಕಂಪೆನಿ ಕಾಗ್ನಿಜೆಂಟ್ 
ವಾಣಿಜ್ಯ

18 ಸಾವಿರ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಆಗ್ರಹ: ಸರ್ಕಾರದ ಮೊರೆ ಹೋಗಲು ಒಕ್ಕೂಟ ನಿರ್ಧಾರ

ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ.

ಬೆಂಗಳೂರು: ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ.

ಪ್ರಾಜೆಕ್ಟ್ ಗಳನ್ನು ಈ ಕೋವಿಡ್-19 ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಭಾರತದಲ್ಲಿರುವ ತನ್ನ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಹೇಳುತ್ತಿದೆ. ಈ ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ವ್ಯವಸ್ಥಾಪಕರ ಒತ್ತಡಕ್ಕೆ ಮಣಿದು ಕೆಲಸಕ್ಕೆ ರಾಜೀನಾಮೆ ನೀಡಬೇಡಿ ಎಂದು ಎಲ್ಲಾ ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಕರೆ ನೀಡುವ ಅಭಿಯಾನ ಆರಂಭಿಸಲಾಗಿದೆ ಎಂದು ಕರ್ನಾಟಕ ಐಟಿ ಉದ್ಯೋಗಿಗಳ ಒಕ್ಕೂಟದ(ಕೆಐಟಿಯು) ವಕ್ತಾರ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಸಾಮೂಹಿಕವಾಗಿ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಹೇಳುವುದು ಕಾರ್ಮಿಕ ಕಾನೂನಿಗೆ ವಿರುದ್ಧವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ಸಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಕಾಗ್ನಿಜೆಂಟ್ ಕಂಪೆನಿಯ ಉದ್ಯೋಗಿಯೊಬ್ಬರು, ಹೊಸ ಪ್ರಾಜೆಕ್ಟ್ ಗಳನ್ನು ಪಡೆದುಕೊಳ್ಳಲು ಸಾಧ್ಯವಾಗದೆ ಕೆಲಸ ಇಲ್ಲದಿರುವುದರಿಂದ ಇನ್ನು ಒಂದು-ಒಂದೂವರೆ ತಿಂಗಳಲ್ಲಿ ರಾಜೀನಾಮೆ ಕೊಡಿ ಎಂದು ಮ್ಯಾನೇಜ್ ಮೆಂಟ್ ಒತ್ತಡ ಹಾಕುತ್ತಿದೆ ಎಂದು ಹೇಳಿದ್ದಾರೆ.

ಯಾವುದೇ ಕಂಪೆನಿ 100ಕ್ಕಿಂತ ಹೆಚ್ಚು ಮಂದಿ ಉದ್ಯೋಗಿಗಳನ್ನು ಹೊಂದಿದ್ದರೆ ಅಲ್ಲಿ ಸಾಮೂಹಿಕ ರಾಜೀನಾಮೆ ಉದ್ಯೋಗಿಗಳಿಂದ ಕೊಡಿಸಲು ಕಾರ್ಮಿಕ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಕೆಲಸವಿಲ್ಲ ಎಂದು ಹಠಾತ್ತನೆ ರಾಜೀನಾಮೆ ಕೊಡಿ ಎಂದು ನೌಕರರಲ್ಲಿ ಹೇಳುವುದು ಕಾನೂನಿಗೆ ವಿರುದ್ಧ. ಕಂಪೆನಿಯವರು ಕೇಳಿದರೆ ರಾಜೀನಾಮೆ ಕೊಡಬೇಡಿ ಎಂದು ನಾವು ಉದ್ಯೋಗಿಗಳಿಗೆ ಹೇಳುತ್ತಿದ್ದೇವೆ ಎಂದು ಕೆಐಟಿಯು ವಕ್ತಾರ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನ ಸಮಯದಲ್ಲಿ ದೇಶಾದ್ಯಂತ ಐಟಿ ವಲಯಗಳಲ್ಲಿ ತೀವ್ರ ಸಂಕಷ್ಟ ಎದುರಾಗಿದ್ದು ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಕಾರ್ಮಿಕ ಇಲಾಖೆ ಮೊರೆ ಹೋಗುತ್ತಿದ್ದಾರೆ.

ಈ ಬಗ್ಗೆ ಕಾಗ್ನಿಜೆಂಟ್ ಕಂಪೆನಿಯ ಮುಖ್ಯಸ್ಥರಿಂದ ಪ್ರತಿಕ್ರಿಯೆ ಕೇಳೋಣವೆಂದು ಇ ಮೇಲ್ ಹಾಕಿದರೆ ಅಲ್ಲಿಂದ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT