ಫ್ಲಿಪ್​ಕಾರ್ಟ್ 
ವಾಣಿಜ್ಯ

ವಾಲ್ ಮಾರ್ಟ್ ನಿಂದ ಹೂಡಿಕೆ ಅವಕಾಶ; 24.9 ಬಿಲಿಯನ್ ಡಾಲರ್ ಮೌಲ್ಯ ಹೆಚ್ಚಿಸಿಕೊಂಡ ಫ್ಲಿಪ್​ಕಾರ್ಟ್ ಸಂಸ್ಥೆ

ಕೊರೋನಾ ವೈರಸ್ ಬಿಕ್ಕಟ್ಟಿನ ನಡುವೆಯೇ ಭಾರತದ ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.

ನವದೆಹಲಿ: ಕೊರೋನಾ ವೈರಸ್ ಬಿಕ್ಕಟ್ಟಿನ ನಡುವೆಯೇ ಭಾರತದ ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.

ಹೌದು...ಫ್ಲಿಪ್‌ಕಾರ್ಟ್ ಗ್ರೂಪ್ ತನ್ನ ಇ-ಕಾಮರ್ಸ್ ಮಾರುಕಟ್ಟೆಯಲ್ಲಿ ಹೆಚ್ಚುವರಿ 1.2 ಬಿಲಿಯನ್ ಇಕ್ವಿಟಿ ಸ್ವತ್ತನ್ನು ಹೆಚ್ಚಿಸಿಕೊಂಡಿದೆ. ಫ್ಲಿಪ್​ಕಾರ್ಟ್​ನ ಬಹುಪಾಲು ಪಾಲುದಾರಿಕೆ ಹೊಂದಿರುವ ವಾಲ್​ಮಾರ್ಟ್​ ನೇತೃತ್ವದಲ್ಲಿ ಕಂಪನಿಯ ಇತರೆ ಷೇರುದಾರರು ಈ ಹೂಡಿಕೆ ಮಾಡಿದ್ದಾರೆ. ಇದರೊಂದಿಗೆ ಕಂಪನಿಯ ಮೌಲ್ಯ 24.9 ಬಿಲಿಯನ್ ಡಾಲರ್ ಆಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಹಣವನ್ನು ಎರಡು ಕಂತುಗಳಲ್ಲಿ ನೀಡಲಾಗುವುದು ಎಂದು ಹೇಳಲಾಗಿದೆ.

ಈ ಬಗ್ಗೆ ಮಾತನಾಡಿರುವ ಫ್ಲಿಪ್​ಕಾರ್ಟ್​ನ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ, 'ಕೊರೋನಾ ವೈರಸ್ ನಂತಹ ಸಾಂಕ್ರಾಮಿಕ ಸವಾಲಿನ ಸಮಯದಲ್ಲಿ ನಾವು ನಮ್ಮ ಸಂಸ್ಥೆಯನ್ನು ಸದೃಢವಾಗಿ ಬೆಳೆಸುವುದಕ್ಕೆ ಮತ್ತು ಭಾರತೀಯರ ಅವಶ್ಯಕತೆಗಳನ್ನು ಪೂರೈಸುವಿಕೆ ಹೆಚ್ಚುತ್ತಿರುವುದರಿಂದ ನಮ್ಮ ಷೇರುದಾರರು ಬೆಂಬಲವಾಗಿ ನಿಂತಿದ್ದಕ್ಕೆ ಅವರಿಗೆ ನಾವು ಕೃತಜ್ಞರಾಗಿದ್ದೇವೆ ಎಂದು ಹೇಳಿದ್ದಾರೆ. 

ಅಂತೆಯೇ ಫ್ಲಿಪ್‌ಕಾರ್ಟ್‌ನಲ್ಲಿ ವಾಲ್‌ಮಾರ್ಟ್‌ ಹೂಡಿಕೆ ಆರಂಭ ಆದಾಗಿನಿಂದಲೂ ನಮ್ಮ ತಂತ್ರಜ್ಞಾನ, ಪಾಲುದಾರಿಕೆ ಮತ್ತು ಹೊಸ ಸೇವೆಗಳ ಮೂಲಕ ನಾವು ನಮ್ಮ ಕೊಡುಗೆಯನ್ನು ಹೆಚ್ಚು ವಿಸ್ತರಿಸಿಕೊಂಡಿದ್ದೇವೆ. ಇಂದು, ನಾವು ಎಲೆಕ್ಟ್ರಾನಿಕ್ಸ್ ಮತ್ತು ಫ್ಯಾಷನ್‌ನಲ್ಲಿ ಹೆಚ್ಚು ಮುನ್ನಡೆಯುತ್ತಿದ್ದೇವೆ. ಮತ್ತು ನಮ್ಮ ಗ್ರಾಹಕರಿಗೆ ತಡೆರಹಿತ ಪಾವತಿ ಮತ್ತು ವಿತರಣೆ ಇತರೆ ಸಾಮಾನ್ಯ ಸರಕು ವಿಭಾಗಗಳು ಮತ್ತು ದಿನಸಿಗಳಲ್ಲಿ ಪಾಲನ್ನು ಹೆಚ್ಚಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ 200 ಮಿಲಿಯನ್ ಭಾರತೀಯ ವ್ಯಾಪಾರಿಗಳನ್ನು ಆನ್‌ಲೈನ್‌ ವ್ಯವಸ್ಥೆಯಡಿ ತರುವ ನಿಟ್ಟಿನಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

2007 ರಲ್ಲಿ ಸ್ಥಾಪನೆಯಾದ ಫ್ಲಿಪ್‌ಕಾರ್ಟ್ ಸಮೂಹವು, ಡಿಜಿಟಲ್ ಪಾವತಿ ಪ್ಲಾಟ್‌ಫಾರ್ಮ್​ಗಳಾದ ಫೋನ್ ಪೇ, ಫ್ಯಾಶನ್ ಸ್ಪೆಷಾಲಿಟಿ, ಮತ್ತು ಇ-ಕಾರ್ಟ್ ಅನ್ನು ಒಳಗೊಂಡಿದೆ. ಮತ್ತು ದ್ವಿತೀಯ ಮತ್ತು ತೃತೀಯ ದರ್ಜೆಯ ಭಾರತದ ನಗರಗಳ ಕೊನೆಯ ಮೈಲಿಯವರೆಗೆ ಸರಕು ಸೇವೆಯನ್ನು ಒದಗಿಸುವ ಲಾಜಿಸ್ಟಿಕ್ಸ್ ಮತ್ತು ವಿತರಣಾ ಸಂಸ್ಥೆಯಾಗಿದೆ. ಫ್ಲಿಪ್​ಕಾರ್ಟ್​ನಲ್ಲಿ ವಾಲ್​ಮಾರ್ಟ್​ 16 ಬಿಲಿಯನ್​ ಹೂಡಿಕೆ ಮಾಡುವ ಮೂಲಕ ಕಂಪನಿಯ ಬಹುಪಾಲು ಷೇರಗಳನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT