ವಾಣಿಜ್ಯ

ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಪಾರುಪತ್ಯ: ಏರ್ಟೆಲ್, ವೊಡಾಫೋನ್ ಗಳಿಗೆ 75 ಲಕ್ಷ ಗ್ರಾಹಕರ ನಷ್ಟ!

 ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (ಟ್ರಾಯ್)ವರದಿಯ ಪ್ರಕಾರ, ಮಾರ್ಚ್ 2020 ರಲ್ಲಿ ಭಾರ್ತಿ ಏರ್ಟೆಲ್ 1.2 ಮಿಲಿಯನ್ ಗ್ರಾಹಕರನ್ನು ಕಳೆದುಕೊಂಡಿದೆ. ವೊಡಾಫೋನ್ ಐಡಿಯಾ ತನ್ನ ಚಂದಾದಾರರಲ್ಲಿ ಅತಿದೊಡ್ಡ ಕುಸಿತವನ್ನು ದಾಖಲಿಸಿದೆ ವೊಡಾಫೋನ್ ಐಡಿಯಾ ಈ ಸಮಯದಲ್ಲಿ 63 ಲಕ್ಷ ಗ್ರಾಹಕರನ್ನು ಕಳೆದುಕೊಂಡಿದೆ. 

ನವದೆಹಲಿ: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (ಟ್ರಾಯ್)ವರದಿಯ ಪ್ರಕಾರ, ಮಾರ್ಚ್ 2020 ರಲ್ಲಿ ಭಾರ್ತಿ ಏರ್ಟೆಲ್ 1.2 ಮಿಲಿಯನ್ ಗ್ರಾಹಕರನ್ನು ಕಳೆದುಕೊಂಡಿದೆ. ವೊಡಾಫೋನ್ ಐಡಿಯಾ ತನ್ನ ಚಂದಾದಾರರಲ್ಲಿ ಅತಿದೊಡ್ಡ ಕುಸಿತವನ್ನು ದಾಖಲಿಸಿದೆ ವೊಡಾಫೋನ್ ಐಡಿಯಾ ಈ ಸಮಯದಲ್ಲಿ 63 ಲಕ್ಷ ಗ್ರಾಹಕರನ್ನು ಕಳೆದುಕೊಂಡಿದೆ. ಈ ಎರಡೂ ಟೆಲಿಕಾಂ ಸಂಸ್ಥೆಗಳು ಒಟ್ಟಾಗಿ  75 ಲಕ್ಷ ಗ್ರಾಹಕರನ್ನು ಕಳೆದುಕೊಂಡಿದೆ.

ಇದೇ ವೇಳೆ ಈ ಎರಡೂ ಸಂಸ್ಥೆಗಳ ಪ್ರತಿಸ್ಪರ್ಧಿ ಸಂಸ್ಥೆ ರಿಲಯನ್ಸ್ ಜಿಯೋ  46 ಲಕ್ಷ ಚಂದಾದಾರರ ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

ಅಂಕಿಅಂಶಗಳ ಪ್ರಕಾರ, ಜಿಯೋ ಮಾರುಕಟ್ಟೆಯಲ್ಲಿ ಶೇಕಡಾ 33.47 ಮುನ್ನಡೆ ಸಾಧಿಸಿದೆ ಮತ್ತು ಚಂದಾದಾರರ ಸಂಖ್ಯೆಯಲ್ಲಿ ಏರ್‌ಟೆಲ್ ಶೇ 28.31 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಮೂರನೆಯದಾಗಿ, ವೊಡಾಫೋನ್ ಐಡಿಯಾವು 27.57 ಶೇಕಡಾ ಮಾರುಕಟ್ಟೆ ಪಾಲನ್ನು ಹೊಂದಿದೆ, ನಂತರದ ಸ್ಥಾನದಲ್ಲಿ ಬಿಎಸ್ಎನ್ಎಲ್ (ಶೇಕಡಾ 10.35) ಮತ್ತು ಎಂಟಿಎನ್ಎಲ್ (ಶೇ 0.29) ಇದೆ.

ಫೆಬ್ರವರಿಯಲ್ಲಿ 9 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಗಳಿಸಿದ್ದ ಏರ್‌ಟೆಲ್‌ಗೆ ಇದು ದೊಡ್ಡ ಆಘಾತವಾಗಿದೆ. ವೊಡಾಫೋನ್ ಐಡಿಯಾ ಗ್ರಾಹಕರ ಸಂಖ್ಯೆ ಕಡಿಮೆಯಾಗುತ್ತಲೇ ಸಾಗಿದೆ. ಈ ಮೊದಲು ಫೆಬ್ರವರಿಯಲ್ಲಿ ಇದು 34 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಕಳೆದುಕೊಂಡಿತ್ತು. ಮಾರ್ಚ್ ನಲ್ಲಿ ರಿಲಯನ್ಸ್ ಜಿಯೋ ಚಂದಾದಾರರ ಸಂಖ್ಯೆ38.7 ಕೋಟಿಗೂ ಅಧಿಕವಾಗಿತ್ತು. ಭಾರ್ತಿ ಏರ್‌ಟೆಲ್‌ನ ಚಂದಾದಾರರ ಸಂಖ್ಯೆ 32.7 ಕೋಟಿವೊಡಾಫೋನ್ ಐಡಿಯಾ (31.9 ಕೋಟಿ), ಬಿಎಸ್‌ಎನ್‌ಎಲ್ (11.9 ಕೋಟಿ), ಮತ್ತು ಎಂಟಿಎನ್‌ಎಲ್ (33.6 ಲಕ್ಷ).

ಮಾರ್ಚ್ 2020 ಟ್ರಾಯ್ ವರದಿಯು ಒಟ್ಟು ಮೊಬೈಲ್ ಚಂದಾದಾರರು ಫೆಬ್ರವರಿ ಅಂತ್ಯದಲ್ಲಿ 116 ಕೋಟಿಯಿಂದ ಮಾರ್ಚ್ ಅಂತ್ಯದ ವೇಳೆಗೆ 115 ಕೋಟಿಗೆ ಇಳಿದಿದೆ ಎಂದು ಬಹಿರಂಗಪಡಿಸಿದೆ.

ಬ್ರಾಡ್‌ಬ್ಯಾಂಡ್ ಚಂದಾದಾರರು

ರಿಲಯನ್ಸ್ ಜಿಯೋ ಬ್ರಾಡ್‌ಬ್ಯಾಂಡ್ ಮಾರುಕಟ್ಟೆಯನ್ನು ನಿಯಂತ್ರಿಸುವುದರ ಜೊತೆಗೆ ಶೇ 56.50 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಈ ವೇಳೆ ಏರ್‌ಟೆಲ್ ಶೇ 21.61 ರೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ವೊಡಾಫೋನ್ ಶೇ 17.09 ಮಾರುಕಟ್ಟೆ ಪಾಲು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!