ಸಾಂದರ್ಭಿಕ ಚಿತ್ರ 
ವಾಣಿಜ್ಯ

ಭಾರತದ ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೆ 100 ದಿನಗಳಲ್ಲಿ 15 ಲಕ್ಷ ಕೋಟಿ ನಷ್ಟ! 

ಭಾರತದ ಆರ್ಥಿಕತೆಯ ಎಲ್ಲಾ ಕ್ಷೇತ್ರಗಳಿಗೂ ಕೊರೋನಾ ವೈರಸ್ ತಡೆಯಲಾರದ ಪೆಟ್ಟು ನೀಡಿದ್ದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೆ 100 ದಿನಗಳಲ್ಲಿ 15 ಲಕ್ಷ ಕೋಟಿ ರೂಪಾಯಿ ನಷ್ಟ ಎದುರಾಗಿದೆ.

ನವದೆಹಲಿ: ಭಾರತದ ಆರ್ಥಿಕತೆಯ ಎಲ್ಲಾ ಕ್ಷೇತ್ರಗಳಿಗೂ ಕೊರೋನಾ ವೈರಸ್ ತಡೆಯಲಾರದ ಪೆಟ್ಟು ನೀಡಿದ್ದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೆ 100 ದಿನಗಳಲ್ಲಿ 15 ಲಕ್ಷ ಕೋಟಿ ರೂಪಾಯಿ ನಷ್ಟ ಎದುರಾಗಿದೆ.

ಕಾನ್ಫೆಡರೇಷನ್ (ಸಿಎಐಟಿ) ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ದೇಶಾದ್ಯಂತ ಇರುವ ವ್ಯಾಪಾಗಳು ಗ್ರಾಹಕರ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ನಷ್ಟ ಎದುರಿಸುತ್ತಿದ್ದಾರೆ, ಆದರೂ ಸಹ ಹಲವಾರು ಆರ್ಥಿಕ ಹೊಣೆಗಳನ್ನು ನಿಭಾಯಿಸಬೇಕಿದೆ ಎಂದು ಹೇಳಿದೆ.

"ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವ್ಯಾಪಾರಿಗಳ ನಷ್ಟಕ್ಕೆ ಸಹಾಯ ಯೋಜನೆಗಳು ಲಭ್ಯವಾಗುತ್ತಿಲ್ಲ. ಇದೂ ಸಹ ವ್ಯಾಪಾರಿಗಳ ನೋವಿಗೆ ಕಾರಣವಾಗಿದೆ ಎಂದು (ಸಿಎಐಟಿ) ಹೇಳಿದೆ.

ಈ ಬಗ್ಗೆ ಸಿಎಐಟಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇವಾಲ್ ಮಾತನಾಡಿದ್ದು, ದೇಶೀಯ ವ್ಯಾಪಾರದ ಪರಿಸ್ಥಿತಿ ಹದಗೆಟ್ಟಿದೆ. ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಶೇ.20 ರಷ್ಟು ಅಂಗಡಿಗಳು ಮುಚ್ಚಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT