ಪೆಟ್ರೋಲ್ ದರ ಕಡಿತ 
ವಾಣಿಜ್ಯ

ಮುಂದುವರೆದ ತೈಲೋತ್ಪನ್ನಗಳ ದರ ಹೆಚ್ಚಳ; ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ, ಡೀಸೆಲ್ 58 ಪೈಸೆ ಏರಿಕೆ

ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆ ಮುಂದುವರೆದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 58 ಪೈಸೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆ ಮುಂದುವರೆದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 58 ಪೈಸೆ ಏರಿಕೆಯಾಗಿದೆ.

ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಕಳೆದ ಎರಡು ತಿಂಗಳು ಜಾಗತಿಕವಾಗಿ ತೈಲ ಬೇಡಿಕೆ ಕುಸಿದು, ಬ್ರೆಂಟ್‌ ಕಚ್ಚಾ ತೈಲ ಫ್ಯೂಚರ್ಸ್‌ ದರ ದಾಖಲೆಯ ಇಳಿಕೆಯಾದರೂ ಭಾರತದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಕೆಯಾಗಲಿಲ್ಲ. ಲಾಕ್‌ ಡೌನ್‌ ಸಡಿಲಿಕೆಯಾಗಿ ಬೇಡಿಕೆ ಹೆಚ್ಚುತ್ತಿದ್ದಂತೆ ದಿನೇ ದಿನೇ ದರ ಹೆಚ್ಚಳ ಸಾಮಾನ್ಯವಾಗಿದೆ. ಸತತ 16 ದಿನಗಳಿಂದ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಕಾಣುತ್ತಿದ್ದು, ಇದೀಗ ಸೋಮವಾರವೂ ಸಹ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.

ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 58 ಪೈಸೆ ಏರಿಕೆಯಾಗಿದೆ. ಈ ಬಗ್ಗೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರದಲ್ಲಿ 33 ಪೈಸೆ ಹೆಚ್ಚಳವಾಗಿ 79.56ರೂಗೆ ಏರಿಕೆಯಾಗಿದೆ. ಅಂತೆಯೇ ಡೀಸೆಲ್‌ ದರ ಕೂಡ 58 ಪೈಸೆ ಏರಿಕೆಯಾಗೆ ರೂ78.85 ಆಗಿದೆ. 

ಇನ್ನು ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ 34 ಪೈಸೆ ಹೆಚ್ಚಳವಾಗಿ ರೂ82.15ಗೆ ಏರಿಕೆಯಾಗಿದ್ದು, ಡೀಸೆಲ್‌ ದರದಲ್ಲಿ 55 ಪೈಸೆ ಹೆಚ್ಚಳವಾಗಿ 74.98ರೂಗೆ ಏರಿಕೆಯಾಗಿದೆ. 

ಕೇಂದ್ರ ಸರ್ಕಾರ ಮಾರ್ಚ್‌ 14ರಂದು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‌ಗೆ ರೂ 3 ಹೆಚ್ಚಿಸಿತು. ಮತ್ತೆ ಮೇ 5ರಂದು ಪ್ರತಿ ಲೀಟರ್‌ ಪೆಟ್ರೋಲ್‌ ಮೇಲಿನ ತೆರಿಗೆ ರೂ10 ಹಾಗೂ ಡೀಸೆಲ್‌ಗೆ ರೂ13 ಹೆಚ್ಚಳ ಮಾಡಿತ್ತು. ಇದರಿಂದಾಗಿ ಸರ್ಕಾರಕ್ಕೆ ರೂ2 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ವರಮಾನ ಸಂಗ್ರಹವಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT