ಭಾರತ-ಚೀನಾ ಧ್ವಜ 
ವಾಣಿಜ್ಯ

ಮುಯ್ಯಿಗೆ ಮುಯ್ಯಿ: ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಪ್ರತಿಯಾಗಿ ಭಾರತದ ಶಿಪ್ಮೆಂಟ್ ಗಳಿಗೆ ನಿರ್ಬಂಧ

ಭಾರತ-ಚೀನಾ ಗಡಿ ಭಾಗದ ಸಮಸ್ಯೆ ಹೆಚ್ಚಾಗುತ್ತಿರುವಂತೆ ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂಬ ಕೂಗು, ಅಭಿಯಾನ ಭಾರತ ದೇಶದಲ್ಲಿ ಜೋರಾಗುತ್ತಿದೆ, ಚೀನಾ ಮೂಲದ ಸಾಗಣೆ ಹಡಗನ್ನು ದೇಶೀಯ ಬಂದರುಗಳಲ್ಲಿ ತಡೆಹಿಡಿದಿರುವ ಭಾರತದ ಕ್ರಮಕ್ಕೆ ಪ್ರತಿಯಾಗಿ ಚೀನಾ ಕೂಡ ಭಾರತ ಮೂಲದ ಸಾಗಾಟ ಹಡಗುಗಳನ್ನು ಹಾಂಕಾಂಗ್ ನಲ್ಲಿ ತಡೆಹಿಡಿಯುತ್ತಿದೆ.

ನವದೆಹಲಿ:ಭಾರತ-ಚೀನಾ ಗಡಿ ಭಾಗದ ಸಮಸ್ಯೆ ಹೆಚ್ಚಾಗುತ್ತಿರುವಂತೆ ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂಬ ಕೂಗು, ಅಭಿಯಾನ ಭಾರತ ದೇಶದಲ್ಲಿ ಜೋರಾಗುತ್ತಿದೆ, ಚೀನಾ ಮೂಲದ ಸಾಗಣೆ ಹಡಗನ್ನು ದೇಶೀಯ ಬಂದರುಗಳಲ್ಲಿ ತಡೆಹಿಡಿದಿರುವ ಭಾರತದ ಕ್ರಮಕ್ಕೆ ಪ್ರತಿಯಾಗಿ ಚೀನಾ ಕೂಡ ಭಾರತ ಮೂಲದ ಸಾಗಾಟ ಹಡಗುಗಳನ್ನು ಹಾಂಕಾಂಗ್ ನಲ್ಲಿ ತಡೆಹಿಡಿಯುತ್ತಿದೆ.

ಚೀನಾ ಭಾರತದ ಕ್ರಮಕ್ಕೆ ಪ್ರತಿಯಾಗಿ ಮುಯ್ಯಿಗೆ ಮುಯ್ಯಿ ಎಂಬಂತೆ ವರ್ತಿಸುತ್ತಿದೆ ಫೆಡರೇಶನ್ ಆಫ್ ಇಂಡಿಯನ್ ಎಕ್ಸ್ಪೊರ್ಟ್ ಆರ್ಗನೈಸೇಷನ್ ((ಎಫ್ಐಇಒ) ಅಧ್ಯಕ್ಷ ಎಸ್ ಕೆ ಸರಾಫ್ ತಿಳಿಸಿದ್ದಾರೆ. ಇದು ವಸ್ತುಗಳ ರವಾನೆ ತೆರವು ವಿಳಂಬಕ್ಕೆ ಕಾರಣವಾಗುತ್ತಿದೆ. ಎಫ್‌ಐಇಒ ಈ ವಿಷಯವನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯಕ್ಕೆ ತಿಳಿಸಿದ್ದು, ಚೀನಾದಿಂದ ಬರುವ ವಸ್ತುಗಳನ್ನು ಪರಿಶೀಲಿಸಿ ಅವುಗಳಿಗೆ ತೆರವು ಅನುಮತಿ ನೀಡುವುದಕ್ಕೆ ವಿಳಂಬವಾಗುತ್ತಿದೆ. ಅಲ್ಲದೆ ಆಮದು ವೆಚ್ಚ ಕೂಡ ಹೆಚ್ಚಾಗುತ್ತಿದೆ ಎಂದು ವಾಣಿಜ್ಯ ಇಲಾಖೆ ಕಾರ್ಯದರ್ಶಿ ಅನೂಪ್ ವಧವಾನ್ ಅವರಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇವೆಲ್ಲಾ ಹಠಾತ್ತನೆ ಆಗಿರುವ ಬೆಳವಣಿಗೆಗಳಾಗಿರುವುದರಿಂದ ಉದ್ಯಮ ಮೇಲೆ ಭಾರೀ ಹೊಡೆತ ಬೀಳುತ್ತಿದೆ. 200ಕ್ಕೂ ಹೆಚ್ಚು ಕೈಗಾರಿಕೆಗಳ ಉದ್ಯಮ ಮೇಲೆ ಕಳೆದ ತಿಂಗಳಿನಿಂದ ಪರಿಣಾಮ ಬೀರಿದೆ. ಈ ಬಗ್ಗೆ ಕೂಡಲೇ ಹಣಕಾಸು ಸಚಿವಾಲಯ ಮಧ್ಯೆ ಪ್ರವೇಶಿಸಬೇಕೆಂದು ಎಫ್ಐಇಒ ಕೋರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT