ಸಾಂದರ್ಭಿಕ ಚಿತ್ರ 
ವಾಣಿಜ್ಯ

2019-20ರ ಆರ್ಥಿಕ ವರ್ಷಕ್ಕೆ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ.8.5 ಕ್ಕೆ ಇಳಿಸಿದ ಇಪಿಎಫ್ಒ

ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು  ಏಳು ವರ್ಷಗಳಲ್ಲಿ ಕಡಿಮೆ ಎನ್ನಲಾದ ಶೇ. 8. 5 ರಷ್ಟು ಪಾವತಿಸಲು ಇಪಿಎಫ್ ಒ ನಿರ್ಧರಿಸಿದೆ. 2018-19ರಲ್ಲಿ ಶೇ. 8. 65 ರಷ್ಟು ಬಡ್ಡಿದರವನ್ನು ಸುಮಾರು ಆರು ಕೋಟಿ ಗ್ರಾಹಕರಿಗೆ ಇಪಿಎಫ್ ಒ  ಪಾವತಿಸಿತ್ತು. 

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಏಳು ವರ್ಷಗಳಲ್ಲಿ ಕಡಿಮೆ ಎನ್ನಲಾದ ಶೇ. 8.5 ರಷ್ಟು ಪಾವತಿಸಲು ಇಪಿಎಫ್ಒ ನಿರ್ಧರಿಸಿದೆ. 2018-19ರಲ್ಲಿ ಶೇ. 8.65 ರಷ್ಟು ಬಡ್ಡಿದರವನ್ನು ಸುಮಾರು ಆರು ಕೋಟಿ ಗ್ರಾಹಕರಿಗೆ ಇಪಿಎಫ್ಒ  ಪಾವತಿಸಿತ್ತು. 

ಇಪಿಎಫ್ಒ - ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಯ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 2019-20 ಆರ್ಥಿಕ ವರ್ಷದಲ್ಲಿ ಭವಿಷ್ಯ ನಿಧಿ ಪಾವತಿದಾರರಿಗೆ ಶೇ. 8.5 ರಷ್ಟು ಬಡ್ಡಿದರವನ್ನು ನೀಡಲು ಸಿಬಿಟಿ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಸಭೆಯ ಬಳಿಕ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದರು.

ಈ ವರ್ಷದಲ್ಲಿ ಭವಿಷ್ಯನಿಧಿ ಗ್ರಾಹಕರಿಗೆ ಶೇ. 8.5 ರಷ್ಟು ಬಡ್ಡಿದರವನ್ನು ನೀಡಲು 700 ಕೋಟಿಯನ್ನು ಇಪಿಎಫ್ಒ ನೀಡುತ್ತಿದೆ ಎಂದು ಸಚಿವರು ತಿಳಿಸಿದರು.

ಈ ವರ್ಷ ಶೇ. 8.55 ರಷ್ಟು ಬಡ್ಡಿದರವನ್ನು ಒದಗಿಸಿದರೆ ಸುಮಾರು 300 ಕೋಟಿಯನ್ನು ಹೆಚ್ಚುವರಿಯಾಗಿ ಇಪಿಎಫ್ ಒ ನೀಡಬೇಕಾಗುತ್ತದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಪ್ರಮಾಣದಲ್ಲಿ ಬಡ್ಡಿದರ ನೀಡಿದರೆ ಇಪಿಎಫ್ ಒ ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಏಳು ವರ್ಷಗಳ ಹಿಂದೆ ಅಂದರೆ 2012-13 ರ ಆರ್ಥಿಕ ವರ್ಷದಲ್ಲಿ ಶೇ. 8.5 ರಷ್ಟು ಬಡ್ಡಿದರವನ್ನು ಕಡಿಮೆಗೊಳಿಸಲಾಗಿತ್ತು. 2016-17ರಲ್ಲಿ ಶೇ. 8.65 ರಷ್ಟು ಹಾಗೂ 2017-18ರಲ್ಲಿ ಶೇ. 8.55 ರಷ್ಟು ಬಡ್ಡಿದರವನ್ನು ಇಪಿಎಫ್ಒ ಪಾವತಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT