ಸಾಂದರ್ಭಿಕ ಚಿತ್ರ 
ವಾಣಿಜ್ಯ

2019-20ರ ಆರ್ಥಿಕ ವರ್ಷಕ್ಕೆ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ.8.5 ಕ್ಕೆ ಇಳಿಸಿದ ಇಪಿಎಫ್ಒ

ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು  ಏಳು ವರ್ಷಗಳಲ್ಲಿ ಕಡಿಮೆ ಎನ್ನಲಾದ ಶೇ. 8. 5 ರಷ್ಟು ಪಾವತಿಸಲು ಇಪಿಎಫ್ ಒ ನಿರ್ಧರಿಸಿದೆ. 2018-19ರಲ್ಲಿ ಶೇ. 8. 65 ರಷ್ಟು ಬಡ್ಡಿದರವನ್ನು ಸುಮಾರು ಆರು ಕೋಟಿ ಗ್ರಾಹಕರಿಗೆ ಇಪಿಎಫ್ ಒ  ಪಾವತಿಸಿತ್ತು. 

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಏಳು ವರ್ಷಗಳಲ್ಲಿ ಕಡಿಮೆ ಎನ್ನಲಾದ ಶೇ. 8.5 ರಷ್ಟು ಪಾವತಿಸಲು ಇಪಿಎಫ್ಒ ನಿರ್ಧರಿಸಿದೆ. 2018-19ರಲ್ಲಿ ಶೇ. 8.65 ರಷ್ಟು ಬಡ್ಡಿದರವನ್ನು ಸುಮಾರು ಆರು ಕೋಟಿ ಗ್ರಾಹಕರಿಗೆ ಇಪಿಎಫ್ಒ  ಪಾವತಿಸಿತ್ತು. 

ಇಪಿಎಫ್ಒ - ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಯ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 2019-20 ಆರ್ಥಿಕ ವರ್ಷದಲ್ಲಿ ಭವಿಷ್ಯ ನಿಧಿ ಪಾವತಿದಾರರಿಗೆ ಶೇ. 8.5 ರಷ್ಟು ಬಡ್ಡಿದರವನ್ನು ನೀಡಲು ಸಿಬಿಟಿ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಸಭೆಯ ಬಳಿಕ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದರು.

ಈ ವರ್ಷದಲ್ಲಿ ಭವಿಷ್ಯನಿಧಿ ಗ್ರಾಹಕರಿಗೆ ಶೇ. 8.5 ರಷ್ಟು ಬಡ್ಡಿದರವನ್ನು ನೀಡಲು 700 ಕೋಟಿಯನ್ನು ಇಪಿಎಫ್ಒ ನೀಡುತ್ತಿದೆ ಎಂದು ಸಚಿವರು ತಿಳಿಸಿದರು.

ಈ ವರ್ಷ ಶೇ. 8.55 ರಷ್ಟು ಬಡ್ಡಿದರವನ್ನು ಒದಗಿಸಿದರೆ ಸುಮಾರು 300 ಕೋಟಿಯನ್ನು ಹೆಚ್ಚುವರಿಯಾಗಿ ಇಪಿಎಫ್ ಒ ನೀಡಬೇಕಾಗುತ್ತದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಪ್ರಮಾಣದಲ್ಲಿ ಬಡ್ಡಿದರ ನೀಡಿದರೆ ಇಪಿಎಫ್ ಒ ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಏಳು ವರ್ಷಗಳ ಹಿಂದೆ ಅಂದರೆ 2012-13 ರ ಆರ್ಥಿಕ ವರ್ಷದಲ್ಲಿ ಶೇ. 8.5 ರಷ್ಟು ಬಡ್ಡಿದರವನ್ನು ಕಡಿಮೆಗೊಳಿಸಲಾಗಿತ್ತು. 2016-17ರಲ್ಲಿ ಶೇ. 8.65 ರಷ್ಟು ಹಾಗೂ 2017-18ರಲ್ಲಿ ಶೇ. 8.55 ರಷ್ಟು ಬಡ್ಡಿದರವನ್ನು ಇಪಿಎಫ್ಒ ಪಾವತಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!