ಸಂಗ್ರಹ ಚಿತ್ರ 
ವಾಣಿಜ್ಯ

ಆರ್ಥಿಕ ಮುಗ್ಗಟ್ಟು ಎದುರಿಸಿರುವ ಯೆಸ್ ಬ್ಯಾಂಕಿಗೆ 18,564 ಕೋಟಿ ರೂ ನಷ್ಟ!

ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಯೆಸ್ ಬ್ಯಾಂಕ್ ಡಿಸೆಂಬರ್ ತ್ರೈಮಾಸಿಕದಲ್ಲಿ 18,654 ಕೋಟಿ ರೂ.ಗಳ ನಷ್ಟದ ವರದಿ ಮಾಡಿದೆ.

ನವದೆಹಲಿ: ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಯೆಸ್ ಬ್ಯಾಂಕ್ ಡಿಸೆಂಬರ್ ತ್ರೈಮಾಸಿಕದಲ್ಲಿ 18,654 ಕೋಟಿ ರೂ.ಗಳ ನಷ್ಟದ ವರದಿ ಮಾಡಿದೆ.

ಒಟ್ಟು ಅನುತ್ಪಾದಕ ಆಸ್ತಿಗಳು ಳು ಡಿಸೆಂಬರ್ 31, 2019 ರ ವೇಳೆಗೆ 40,709 ಕೋಟಿ ರೂ. ಇದ್ದು ಇದು ಒಟ್ಟಾರೆ ಶೇ.18.87 ಪ್ರಮಾಣದಲ್ಲಿದೆ.ಅಲ್ಲದೆ ಇದಕ್ಕೆ ಹಿಂದಿನ ಸೆಪ್ಟೆಂಬರ್ ತ್ರೈಮಾಸಿಕದ 17,134 ಕೋಟಿ ರೂ. ಅಥವಾ ಶೇ. 7.39 ರ ಪ್ರಮಾಣಕ್ಕೆ ಹೋಲಿಸಿದರೆ ಈ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಮಾರ್ಚ್ 5 ರಂದು ಬ್ಯಾಂಕಿನ ನಿರ್ದೇಶಕ ಮಂಡಳಿಯನ್ನು  ಸರ್ಕಾರ ರದ್ದುಗೊಳಿಸಿತು ಮತ್ತು ಆರ್‌ಬಿಐ ಎಸ್‌ಬಿಐನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಪ್ರಶಾಂತ್ ಕುಮಾರ್ ಅವರನ್ನು ನಿರ್ವಾಹಕರಾಗಿ ನೇಮಿಸಿತ್ತು.

ಬಂಡವಾಳವನ್ನು ಸಂಗ್ರಹಿಸಲು ಅಸಮರ್ಥವಾಗಿದ್ದೇ ಯೆಸ್ ಬ್ಯಾಂಕಿನ ಇಂದಿನ ಸ್ಥಿತಿಗೆ ಪ್ರಾಥಮಿಕ ಕಾರಣವೆಂದು ಉಲ್ಲೇಖಿಸಲಾಗಿದೆ, ಇದಕ್ಕಾಗಿ ಬ್ಯಾಂಕನ್ನು ಒಂದು ತಿಂಗಳ ಕಾಲ ನಿಷೇಧದಡಿಯಲ್ಲಿಟ್ಟು ಪ್ರತಿ ಖಾತೆಗೆ 50,000 ರೂ.ಗ ಮಾತ್ರ ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ. 

ಇದೀಗ ಬ್ಯಾಂಕು ತಡವಾಗಿಯಾದರೂ ತನ್ನ ತ್ರೈಮಾಸಿಕ ವರದಿಯನ್ನು ಬಹಿರಂಗಪಡಿಸಿದ್ದು ಬ್ಯಾಂಕಿನ  ಸಹ-ಸಂಸ್ಥಾಪಕ ಮುಖ್ಯ ಕಾರ್ಯನಿರ್ವಾಹಕ ರಾಣಾ ಕಪೂರ್ ಅವರ ನೇತೃತ್ವದ ಕಾರ್ಪೊರೇಟ್ ಆಡಳಿತದ ಅಸಮರ್ಥತೆ ಕಾರಣ ಅವರನ್ನು ಕಳೆದ ವಾರಾಂತ್ಯದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿತ್ತು ಮತ್ತು ಸಿಬಿಐ ಶುಕ್ರವಾರ  ರಾಣಾ ವಿರುದ್ಧ ಹೊಸ ಪ್ರಕರಣ ದಾಖಲಿಸಿದೆ.

ಡಿಸೆಂಬರ್ ತ್ರೈಮಾಸಿಕದಲ್ಲಿ, ಸಾಮಾನ್ಯ ಇಕ್ವಿಟಿ ಶ್ರೇಣಿ -1 ಅನುಪಾತವು ಶೇಕಡಾ 7.375 ರ ಕಡ್ಡಾಯ ಅಗತ್ಯಕ್ಕೆ ಹೋಲಿಸಿದರೆ ಶೇಕಡಾ 0.6 ಕ್ಕೆ ಇಳಿದಿದೆಅಲ್ಲದೆ ಬ್ಯಾಂಕಿನ ದ್ರವ್ಯತೆ ಅನುಪಾತಗಳ ಉಲ್ಲಂಘನೆಯಾಗಿದೆ ಎಂದು ಅದು ವರದಿಯಲ್ಲಿ ಹೇಳಿದೆ. ಹಣಕಾಸಿನ ಒತ್ತಡ ಮತ್ತು ಆರ್‌ಬಿಐ ಕೈಗೊಂಡ ಕ್ರಮಗಳು ಠೇವಣಿದಾರರ ವಿಶ್ವಾಸದ ಮೇಲೆ ಪರಿಣಾಮ ಬೀರಬಹುದು ಮತ್ತು ವಾಪಸಾತಿ ನಡವಳಿಕೆಯು "ಅನಿಶ್ಚಿತ" ವಾಗಿರುತ್ತದೆ ಎಂದು ಲೆಕ್ಕಪರಿಶೋಧಕರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT