ಸಾಂದರ್ಭಿಕ ಚಿತ್ರ 
ವಾಣಿಜ್ಯ

ಹಣಕಾಸು ಸಚಿವರ ಪರಿಹಾರ ಪ್ಯಾಕೇಜ್ ಹಿನ್ನೆಲೆ: 1410 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್

ಕೊರೋನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ತಡೆಯಲು ಹಣಕಾಸು ಸಚಿವರು ಪರಿಹಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಂಬೈ ಷೇರು ಮಾರುಕಟ್ಟೆಯಲ್ಲಿ 1410.99 ಅಂಕಗಳ ಏರಿಕೆ ಕಂಡಿದ್ದು, ದಿನದ ಅಂತ್ಯಕ್ಕೆ 29,946.77 ರಷ್ಟಿತ್ತು. ನಿಫ್ಟಿ ಕೂಡ 323.60 ಅಂಕಗಳಷ್ಟು ಹೆಚ್ಚಳ ಕಂಡು 8,641.45ರಷ್ಟಿತ್ತು.

ಮುಂಬೈ: ಕೊರೋನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ತಡೆಯಲು ಹಣಕಾಸು ಸಚಿವರು ಪರಿಹಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಂಬೈ ಷೇರು ಮಾರುಕಟ್ಟೆಯಲ್ಲಿ 1410.99 ಅಂಕಗಳ ಏರಿಕೆ ಕಂಡಿದ್ದು, ದಿನದ ಅಂತ್ಯಕ್ಕೆ 29,946.77 ರಷ್ಟಿತ್ತು. ನಿಫ್ಟಿ ಕೂಡ 323.60 ಅಂಕಗಳಷ್ಟು ಹೆಚ್ಚಳ ಕಂಡು 8,641.45ರಷ್ಟಿತ್ತು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಲಾಕ್ ಡೌನ್ ಸಮಯದಲ್ಲಿ ಬಡವರು, ರೈತರು, ಮತ್ತಿತರರಿಗೆ ಸಮಸ್ಯೆಯಾಗದಂತೆ 1.7 ಕೋಟಿ ರೂ. ಪರಿಹಾರ ಘೋಷಿಸಿದ್ದರಿಂದ ಷೇರು ಮಾರುಕಟ್ಟೆ ಚೇತರಿಕೆ ಕಂಡಿದೆ. ದಿನದ ಆರಂಭದಲ್ಲಿ ಸೆನ್ಸೆಕ್ಸ್ 538 ಅಂಕಗಳು ಏರಿಕೆ ಕಂಡು 29,073 ರಷ್ಟಿತ್ತು. ನಂತರ ಅದು 1564 ಅಂಕಗಳ ಏರಿಕೆಯಾಯಿತು.

ಮೂರು ವರ್ಷಗಳ ಹಿಂದೆ ಅಂದರೆ 2017ರ ಮೇ ತಿಂಗಳಲ್ಲಿ ಸೆನ್ಸೆಕ್ಸ್ 29,807ಕ್ಕೆ ತಲುಪಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ: 14 ವಿದೇಶಿಯರು ಸೇರಿ 19 ಜನರ ಬಂಧನ, ರೂ. 7.7 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ!

SCROLL FOR NEXT