ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಆರ್‌ಬಿಐ ಕ್ರಮಗಳಿಂದ ಬಹು ಅಪೇಕ್ಷಿತ ಪರಿಹಾರ: ನಿರ್ಮಲಾ ಸೀತಾರಾಮನ್‍

ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಎದುರಿಸುವ ಕ್ರಮವಾಗಿ ರೆಪೊ ದರದಲ್ಲಿ 75 ಮೂಲಾಂಕ ಕಡಿತಗೊಳಿಸುವ ರಿಸರ್ವ್‍ ಬ್ಯಾಂಕ್‍ ಪ್ರಕಟಣೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ. 

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಎದುರಿಸುವ ಕ್ರಮವಾಗಿ ರೆಪೊ ದರದಲ್ಲಿ 75 ಮೂಲಾಂಕ ಕಡಿತಗೊಳಿಸುವ ರಿಸರ್ವ್‍ ಬ್ಯಾಂಕ್‍ ಪ್ರಕಟಣೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ. 

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಿಂಗಳ ಮಾಸಿಕ ಕಂತುಗಳ ಪಾವತಿ ಮೂರು ತಿಂಗಳು ಮುಂದೂಡಿರುವುದು ಮತ್ತು ಕಾರ್ಯನಿರ್ವಹಣೆ ಬಂಡವಾಳ ಮೇಲಿನ ಬಡ್ಡಿ ಬಹು ಅಪೇಕ್ಷಿತ ಪರಿಹಾರ ಒದಗಿಸಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

‘ಹಣಕಾಸು ಸ್ಥಿರತೆಯ ಬಗ್ಗೆ ಆರ್‌ಬಿಐ ಗವರ್ನರ್‍ ಶಕ್ತಿಕಾಂತ ದಾಸ್ ಧೈರ್ಯ ತುಂಬುವ ಮಾತುಗಳನ್ನಾಡಿರುವುದು ಶ್ಲಾಘನೀಯ. ಸಾಲಗಳ ತಿಂಗಳ ಮಾಸಿಕ ಕಂತು (ಇಎಂಐ) ಪಾವತಿಯನ್ನು ಮೂರು ತಿಂಗಳು ಮುಂದೂಡಿರುವುದು ಮತ್ತು ಕಾರ್ಯನಿರತ ಬಂಡವಾಳದ ಮೇಲಿನ ಬಡ್ಡಿ ಹೆಚ್ಚು ಅಪೇಕ್ಷಿತ ಪರಿಹಾರವನ್ನು ಒದಗಿಸಿಕೊಡಲಿದೆ. ಕಡಿತಗೊಳಿಸಿದ ಬಡ್ಡಿದರ ತ್ವರಿತವಾಗಿ ವರ್ಗಾವಣೆಗೊಳ್ಳಬೇಕಾಗಿದೆ.’ ಎಂದು ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭಾರತೀಯ ಆರ್ಥಿಕತೆಯ ಮೂಲಾಧಾರಗಳು ಸದೃಢವಾಗಿವೆ. 2008-09ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರದ ಪರಿಸ್ಥಿತಿಗಳಿಗಿಂತ ಇದೀಗ ಭಾರತೀಯ ಆರ್ಥಿಕತೆ ಸದೃಢವಾಗಿದೆ ಎಂಬ ಶಕ್ತಿಕಾಂತ್‍ ದಾಸ್‍ ಅವರ ಹೇಳಿಕೆಯನ್ನು ನಿರ್ಮಲಾ ಸೀತಾರಾಮನ್‍ ಸ್ವಾಗತಿಸಿದ್ದಾರೆ. ಸ್ವಚ್ಛವಾಗಿರಲು, ಸುರಕ್ಷಿತವಾಗಿರಲು ಡಿಜಿಟಲ್‍ ಪಾವತಿ ಮಾಡಿ ಎಂದು ದಾಸ್ ಅವರು ಸಮಯೋಚಿತ ಕಿವಿಮಾತು ಹೇಳಿರುವುದನ್ನು ಸಚಿವರು ಸ್ವಾಗತಿಸಿದ್ದಾರೆ. ಆರ್‌ಬಿಐ ಗವರ್ನರ್ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿರುವ ನೀತಿ ಆಯೋಗ ಸಿಇಒ ಅಮಿತಾಭ್ ಕಾಂತ್, ಇವು ದಿಟ್ಟ ಮತ್ತು ಮಹಾ ಕ್ರಮಗಳಾಗಿವೆ ಅವರು ಬಣ್ಣಿಸಿದ್ದಾರೆ.

ಕೊವಿದ್‍-19 ಹಿನ್ನೆಲೆಯಲ್ಲಿ ಆರ್ಥಿಕ ಕುಸಿತ ತಡೆಯಲು ರಿಸರ್ವ್‍ ಬ್ಯಾಂಕ್‍ ಶುಕ್ರವಾರ, ಪ್ರಮುಖ ದರಗಳಾದ ರೆಪೊ ದರ 75 ಮೂಲಾಂಕ ಮತ್ತು ರಿವರ್ಸ್‍ ರೆಪೋ ದರ 100 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಅಲ್ಲೆ, ಬಾಕಿ ಇರುವ ಎಲ್ಲಾ ಸಾಲಗಳಿಗೆ ಮೂರು ತಿಂಗಳ ಕಾಲ ಇಎಂಐ ಪಾವತಿಯನ್ನು ಮುಂದೂಡಲಾಗಿದೆ. ಈ ಇಳಿಕೆಯೊಂದಿಗೆ ರೆಪೊ ದರ ಶೇ 4.4 ಮತ್ತು ರಿವರ್ಸ್ ರೆಪೊ ದರ ಶೇ 4.15 ರಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT