ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಆರ್‌ಬಿಐ ಕ್ರಮಗಳಿಂದ ಬಹು ಅಪೇಕ್ಷಿತ ಪರಿಹಾರ: ನಿರ್ಮಲಾ ಸೀತಾರಾಮನ್‍

ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಎದುರಿಸುವ ಕ್ರಮವಾಗಿ ರೆಪೊ ದರದಲ್ಲಿ 75 ಮೂಲಾಂಕ ಕಡಿತಗೊಳಿಸುವ ರಿಸರ್ವ್‍ ಬ್ಯಾಂಕ್‍ ಪ್ರಕಟಣೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ. 

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಎದುರಿಸುವ ಕ್ರಮವಾಗಿ ರೆಪೊ ದರದಲ್ಲಿ 75 ಮೂಲಾಂಕ ಕಡಿತಗೊಳಿಸುವ ರಿಸರ್ವ್‍ ಬ್ಯಾಂಕ್‍ ಪ್ರಕಟಣೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ. 

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಿಂಗಳ ಮಾಸಿಕ ಕಂತುಗಳ ಪಾವತಿ ಮೂರು ತಿಂಗಳು ಮುಂದೂಡಿರುವುದು ಮತ್ತು ಕಾರ್ಯನಿರ್ವಹಣೆ ಬಂಡವಾಳ ಮೇಲಿನ ಬಡ್ಡಿ ಬಹು ಅಪೇಕ್ಷಿತ ಪರಿಹಾರ ಒದಗಿಸಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

‘ಹಣಕಾಸು ಸ್ಥಿರತೆಯ ಬಗ್ಗೆ ಆರ್‌ಬಿಐ ಗವರ್ನರ್‍ ಶಕ್ತಿಕಾಂತ ದಾಸ್ ಧೈರ್ಯ ತುಂಬುವ ಮಾತುಗಳನ್ನಾಡಿರುವುದು ಶ್ಲಾಘನೀಯ. ಸಾಲಗಳ ತಿಂಗಳ ಮಾಸಿಕ ಕಂತು (ಇಎಂಐ) ಪಾವತಿಯನ್ನು ಮೂರು ತಿಂಗಳು ಮುಂದೂಡಿರುವುದು ಮತ್ತು ಕಾರ್ಯನಿರತ ಬಂಡವಾಳದ ಮೇಲಿನ ಬಡ್ಡಿ ಹೆಚ್ಚು ಅಪೇಕ್ಷಿತ ಪರಿಹಾರವನ್ನು ಒದಗಿಸಿಕೊಡಲಿದೆ. ಕಡಿತಗೊಳಿಸಿದ ಬಡ್ಡಿದರ ತ್ವರಿತವಾಗಿ ವರ್ಗಾವಣೆಗೊಳ್ಳಬೇಕಾಗಿದೆ.’ ಎಂದು ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭಾರತೀಯ ಆರ್ಥಿಕತೆಯ ಮೂಲಾಧಾರಗಳು ಸದೃಢವಾಗಿವೆ. 2008-09ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರದ ಪರಿಸ್ಥಿತಿಗಳಿಗಿಂತ ಇದೀಗ ಭಾರತೀಯ ಆರ್ಥಿಕತೆ ಸದೃಢವಾಗಿದೆ ಎಂಬ ಶಕ್ತಿಕಾಂತ್‍ ದಾಸ್‍ ಅವರ ಹೇಳಿಕೆಯನ್ನು ನಿರ್ಮಲಾ ಸೀತಾರಾಮನ್‍ ಸ್ವಾಗತಿಸಿದ್ದಾರೆ. ಸ್ವಚ್ಛವಾಗಿರಲು, ಸುರಕ್ಷಿತವಾಗಿರಲು ಡಿಜಿಟಲ್‍ ಪಾವತಿ ಮಾಡಿ ಎಂದು ದಾಸ್ ಅವರು ಸಮಯೋಚಿತ ಕಿವಿಮಾತು ಹೇಳಿರುವುದನ್ನು ಸಚಿವರು ಸ್ವಾಗತಿಸಿದ್ದಾರೆ. ಆರ್‌ಬಿಐ ಗವರ್ನರ್ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿರುವ ನೀತಿ ಆಯೋಗ ಸಿಇಒ ಅಮಿತಾಭ್ ಕಾಂತ್, ಇವು ದಿಟ್ಟ ಮತ್ತು ಮಹಾ ಕ್ರಮಗಳಾಗಿವೆ ಅವರು ಬಣ್ಣಿಸಿದ್ದಾರೆ.

ಕೊವಿದ್‍-19 ಹಿನ್ನೆಲೆಯಲ್ಲಿ ಆರ್ಥಿಕ ಕುಸಿತ ತಡೆಯಲು ರಿಸರ್ವ್‍ ಬ್ಯಾಂಕ್‍ ಶುಕ್ರವಾರ, ಪ್ರಮುಖ ದರಗಳಾದ ರೆಪೊ ದರ 75 ಮೂಲಾಂಕ ಮತ್ತು ರಿವರ್ಸ್‍ ರೆಪೋ ದರ 100 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಅಲ್ಲೆ, ಬಾಕಿ ಇರುವ ಎಲ್ಲಾ ಸಾಲಗಳಿಗೆ ಮೂರು ತಿಂಗಳ ಕಾಲ ಇಎಂಐ ಪಾವತಿಯನ್ನು ಮುಂದೂಡಲಾಗಿದೆ. ಈ ಇಳಿಕೆಯೊಂದಿಗೆ ರೆಪೊ ದರ ಶೇ 4.4 ಮತ್ತು ರಿವರ್ಸ್ ರೆಪೊ ದರ ಶೇ 4.15 ರಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!