ವಾಣಿಜ್ಯ

ಹಣಕಾಸು ವರ್ಷದಲ್ಲಿ ವಿಸ್ತರಣೆ ಇಲ್ಲ, ಮುದ್ರಾಂಕ ತೆರಿಗೆ ಅವಧಿ 3 ತಿಂಗಳು ವಿಸ್ತರಣೆ

2019-20ನೇ ಸಾಲಿನ ಹಣಕಾಸು ವರ್ಷದ ಅವಧಿಯನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಸ್ತರಿಸದ ಕೇಂದ್ರ ಸರ್ಕಾರ ಯಥಾಪ್ರಕಾರ ಪ್ರತಿವರ್ಷದಂತೆ ಈ ವರ್ಷ ಕೂಡ ಇಂದಿಗೆ(ಮಾರ್ಚ್31) ಮುಕ್ತಾಯವಾಗಲಿದೆ.

ನವದೆಹಲಿ: 2019-20ನೇ ಸಾಲಿನ ಹಣಕಾಸು ವರ್ಷದ ಅವಧಿಯನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಸ್ತರಿಸದ ಕೇಂದ್ರ ಸರ್ಕಾರ ಯಥಾಪ್ರಕಾರ ಪ್ರತಿವರ್ಷದಂತೆ ಈ ವರ್ಷ ಕೂಡ ಇಂದಿಗೆ(ಮಾರ್ಚ್31) ಮುಕ್ತಾಯವಾಗಲಿದೆ.

ಈ ಹಿಂದೆ ಪ್ರಸಕ್ತ ಹಣಕಾಸು ವರ್ಷ ಜುಲೈ 1ರಿಂದ ಆರಂಭವಾಗಲಿದೆ ಎಂದು ವರದಿಯಾಗಿತ್ತು. ಆದರೆ ಹಣಕಾಸು ವರ್ಷವನ್ನು ವಿಸ್ತರಿಸುವುದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಈ ಸಂಬಂಧ ಕಳೆದ ಸಂಜೆ ಗೆಜೆಟೆಡ್ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರ್ಕಾರ ಮುದ್ರಾಂಕ ತೆರಿಗೆ ದಿನಾಂಕವನ್ನು ಏಪ್ರಿಲ್ 1ರಿಂದ ಜುಲೈ1ಕ್ಕೆ ವಿಸ್ತರಿಸಿದೆ. ಭಾರತೀಯ ಮುದ್ರಾಂಕ ಕಾಯ್ದೆ(ಐಎಸ್ಎ)ಗೆ ತಿದ್ದುಪಡಿ ತಂದಿರುವ ಹಣಕಾಸು ಸಚಿವಾಲಯ ಅದನ್ನು ಜುಲೈ 1ಕ್ಕೆ ಮುಂದೂಡಿದೆ. ಈ ತಿದ್ದುಪಡಿ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ.

ಕೊರೋನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಣಕಾಸು ವರ್ಷವನ್ನು ಮೂರು ತಿಂಗಳು ವಿಸ್ತರಿಸಬೇಕೆಂದು ಉದ್ಯಮವಲಯಗಳಿಂದ ಕೇಳಿಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ