ಅಸೋಚಾಮ್ 
ವಾಣಿಜ್ಯ

ಹಣಕಾಸು ಸಚಿವರ ಘೋಷಣೆಗಳಿಂದ ಎಂಎಸ್‍ಎಂಇಗಳಿಗೆ ಹೊಸ ಜೀವ: ಅಸೋಚಾಮ್‍

ದೇಶವ್ಯಾಪಿ ಲಾಕ್ ಡೌನ್ ನಿಂದ ತೀವ್ರ ಬಾಧಿತವಾಗಿರುವ ಸಣ್ಣ,ಅತಿಸಣ್ಣ ಮತ್ತು ಮಧ್ಯಮ(ಎಂಎಸ್ಎಂಇ) ಉದ್ಯಮಗಳು, ಕಿರು ಹಣಕಾಸು ಸಂಸ್ಥೆಗಳು, ವಸತಿ ಆರ್ಥಿಕ ನೆರವು ಸಂಸ್ಥೆಗಳು, ರಿಯಲ್ ಎಸ್ಟೇಟ್ ಮತ್ತು ಅತ್ಯವಸರ ಪರಿಹಾರ ದೊರೆತಂತಾಗಿದೆ ಎಂದು ಅಸೋಚಾಮ್ ಮಹಾಕಾರ್ಯದರ್ಶಿ ದೀಪಕ್ ಸೂದ್ ಹೇಳಿದ್ದಾರೆ.

ಚಂಡೀಗಢ: ಆರ್ಥಿಕತೆ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರಮೋದಿ ಘೋಷಿಸಿದ 20 ಲಕ್ಷ ರೂ ಪ್ಯಾಕೇಜ್ ನ ಭಾಗವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಪ್ರಕಟಿಸಿದ ಕ್ರಮಗಳಿಂದ ದೇಶವ್ಯಾಪಿ ಲಾಕ್ ಡೌನ್ ನಿಂದ ತೀವ್ರ ಬಾಧಿತವಾಗಿರುವ ಸಣ್ಣ, ಅತಿಸಣ್ಣ ಮತ್ತು ಮಧ್ಯಮ(ಎಂಎಸ್ಎಂಇ) ಉದ್ಯಮಗಳು, ಕಿರು ಹಣಕಾಸು ಸಂಸ್ಥೆಗಳು, ವಸತಿ ಆರ್ಥಿಕ ನೆರವು ಸಂಸ್ಥೆಗಳು, ರಿಯಲ್ ಎಸ್ಟೇಟ್ ಮತ್ತು ನಿರ್ಮಾಣ ವಲಯಗಳಿಗೆ ಅತ್ಯಗತ್ಯ ಮತ್ತು ಅತ್ಯವಸರ ಪರಿಹಾರ ದೊರೆತಂತಾಗಿದೆ ಎಂದು ಅಸೋಚಾಮ್ ಮಹಾಕಾರ್ಯದರ್ಶಿ ದೀಪಕ್ ಸೂದ್ ಹೇಳಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿರೂ ಸಾಲ ಸೌಲಭ್ಯ ಒದಗಿಸಿರುವುದು ದೇಶದ ಜಿಡಿಪಿಗೆ ಶೇ 30ರಷ್ಟು ಕೊಡುಗೆ ನೀಡುತ್ತಿರುವ ಮತ್ತು 11 ಕೋಟಿ ಉದ್ಯೋಗ ಸೃಷ್ಟಿಸುತ್ತಿರುವ ಎಂಎಸ್ಎಂಇ ವಲಯದ ಪುನಶ್ಚೇತನಕ್ಕೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ. 

ಸರ್ಕಾರದ ಖಾತರಿಯೊಂದಿಗೆ ಎಂಎಸ್ಎಂಇಗಳಿಗೆ ಮೂರು ಲಕ್ಷ ಕೋಟಿ ರೂ. ಸಾಲ ಒದಗಿಸಿರುವುದು ಆರ್ಥಿಕತೆಯ ಮೇಲೆ ಹೆಚ್ಚು ಪರಿಣಾಮ ಬೀರಿ, 10 ಲಕ್ಷ ಕೋಟಿ ರೂ. ಮೊತ್ತದ ಆರ್ಥಿಕ ಚಟುವಟಿಕೆಗಳಿಗೆ ಕಾರಣವಾಗಲಿದೆ. ಅಲ್ಲದೆ, ಉದ್ಯೋಗಗಳನ್ನು ಉಳಿಸಿಕೊಳ್ಳುವುದು ಮಾತ್ರವಲ್ಲದೆ ಹೆಚ್ಚುವರಿ ಉದ್ಯೋಗ ಸೃಷ್ಟಿಸಲಿದೆ ಎಂದು ಸೂದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT