ಸಂಗ್ರಹ ಚಿತ್ರ 
ವಾಣಿಜ್ಯ

ಎನ್‍ಬಿಎಫ್‍ಸಿಗಳು, ಎಚ್‍ಎಫ್‍ಸಿಗಳಿಗೆ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ!

ನೂತನ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನವದೆಹಲಿ: ಬ್ಯಾಂಕೇತರ ಹಣಕಾಸು ಕಂಪನಿಗಳು ಮತ್ತು ಗೃಹ ಹಣಕಾಸು ಕಂಪೆನಿಗಳ ನಗದೀಕರಣ ಸ್ಥಿತಿ ಸುಧಾರಿಸಲು ಈ ಕಂಪೆನಿಗಳಿಗೆ ನೂತನ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ಯೋಜನೆಯಿಂದ ಸರ್ಕಾರಕ್ಕೆ 5 ಕೋಟಿ ರೂ. ನೇರ ಆರ್ಥಿಕ ಹೊರೆಯಾಗಲಿದ್ದು, ಇದು ವಿಶೇಷ ಉದ್ದೇಶಕ ವಾಹಕ(ಎಸ್‍ಪಿವಿ) ಗೆ ಈಕ್ವಿಟಿ ಕೊಡುಗೆ ನೀಡಲಿದೆ. ಅಲ್ಲದೆ, ಜಾಮೀನುದಾರ ಸಂಸ್ಥೆಗಳನ್ನು ರದ್ದುಪಡಿಸುವವರೆಗೆ ಸರ್ಕಾರದ ಮೇಲೆ ಇದರಿಂದ ಆರ್ಥಿಕ ಪರಿಣಾಮ ಉಂಟಾಗುವುದಿಲ್ಲ.

ವಿಶೇಷ ಉದ್ದೇಶಕ ವಾಹಕ(ಎಸ್‍ಪಿವಿ) ಮೂಲಕ ಬ್ಯಾಂಕೇತರ ಹಣಕಾಸು ಕಂಪೆನಿಗಳು, ವಸತಿ ಹಣಕಾಸು ಕಂಪೆನಿಗಳ ನಗದೀಕರಣ ಸಮಸ್ಯೆಗಳನ್ನು ಪರಿಹಾರಕ್ಕೆ ಕಾರ್ಯಚೌಕಟ್ಟು ರೂಪಿಸಲು ಸರ್ಕಾರ ಉದ್ದೇಶಿಸಿದೆ.

ಎಸ್‍ಪಿವಿ ನಿರ್ವಹಣೆಗೆ ದೊಡ್ಡ ಸಾರ್ವಜನಿಕ ಬ್ಯಾಂಕ್‍ ಅನ್ನು ನಿಯೋಜಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT