ಸಂಗ್ರಹ ಚಿತ್ರ 
ವಾಣಿಜ್ಯ

ಎನ್‍ಬಿಎಫ್‍ಸಿಗಳು, ಎಚ್‍ಎಫ್‍ಸಿಗಳಿಗೆ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ!

ನೂತನ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನವದೆಹಲಿ: ಬ್ಯಾಂಕೇತರ ಹಣಕಾಸು ಕಂಪನಿಗಳು ಮತ್ತು ಗೃಹ ಹಣಕಾಸು ಕಂಪೆನಿಗಳ ನಗದೀಕರಣ ಸ್ಥಿತಿ ಸುಧಾರಿಸಲು ಈ ಕಂಪೆನಿಗಳಿಗೆ ನೂತನ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ಯೋಜನೆಯಿಂದ ಸರ್ಕಾರಕ್ಕೆ 5 ಕೋಟಿ ರೂ. ನೇರ ಆರ್ಥಿಕ ಹೊರೆಯಾಗಲಿದ್ದು, ಇದು ವಿಶೇಷ ಉದ್ದೇಶಕ ವಾಹಕ(ಎಸ್‍ಪಿವಿ) ಗೆ ಈಕ್ವಿಟಿ ಕೊಡುಗೆ ನೀಡಲಿದೆ. ಅಲ್ಲದೆ, ಜಾಮೀನುದಾರ ಸಂಸ್ಥೆಗಳನ್ನು ರದ್ದುಪಡಿಸುವವರೆಗೆ ಸರ್ಕಾರದ ಮೇಲೆ ಇದರಿಂದ ಆರ್ಥಿಕ ಪರಿಣಾಮ ಉಂಟಾಗುವುದಿಲ್ಲ.

ವಿಶೇಷ ಉದ್ದೇಶಕ ವಾಹಕ(ಎಸ್‍ಪಿವಿ) ಮೂಲಕ ಬ್ಯಾಂಕೇತರ ಹಣಕಾಸು ಕಂಪೆನಿಗಳು, ವಸತಿ ಹಣಕಾಸು ಕಂಪೆನಿಗಳ ನಗದೀಕರಣ ಸಮಸ್ಯೆಗಳನ್ನು ಪರಿಹಾರಕ್ಕೆ ಕಾರ್ಯಚೌಕಟ್ಟು ರೂಪಿಸಲು ಸರ್ಕಾರ ಉದ್ದೇಶಿಸಿದೆ.

ಎಸ್‍ಪಿವಿ ನಿರ್ವಹಣೆಗೆ ದೊಡ್ಡ ಸಾರ್ವಜನಿಕ ಬ್ಯಾಂಕ್‍ ಅನ್ನು ನಿಯೋಜಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT