ಸಾಂದರ್ಭಿಕ ಚಿತ್ರ 
ವಾಣಿಜ್ಯ

ಲಾಕ್ ಡೌನ್ ನಿಂದ 90 ಸಾವಿರ ಕೋಟಿ ರೂ. ನಷ್ಟ; ಸೂಕ್ತ ಪರಿಹಾರಕ್ಕೆ ಶಾಪಿಂಗ್ ಮಾಲ್ ಮಾಲೀಕರ ಒಕ್ಕೂಟ ಆಗ್ರಹ

ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ 90 ಸಾವಿರ ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದ್ದು ಸರ್ಕಾರ ರೆಪೊ ದರ ಕಡಿತ, ಇಎಂಐ ಪಾವತಿ ವಿಸ್ತರಣೆ ಜೊತೆಗೆ ಇನ್ನೂ ಹಲವು ಆರ್ಥಿಕ ನೆರವು ಕ್ರಮಗಳನ್ನು ಪ್ರಕಟಿಸಬೇಕು ಎಂದು ಶಾಪಿಂಗ್ ಸೆಂಟರ್ ಒಕ್ಕೂಟ ಒತ್ತಾಯಿಸಿದೆ.

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ 90 ಸಾವಿರ ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದ್ದು ಸರ್ಕಾರ ರೆಪೊ ದರ ಕಡಿತ, ಇಎಂಐ ಪಾವತಿ ವಿಸ್ತರಣೆ ಜೊತೆಗೆ ಇನ್ನೂ ಹಲವು ಆರ್ಥಿಕ ನೆರವು ಕ್ರಮಗಳನ್ನು ಪ್ರಕಟಿಸಬೇಕು ಎಂದು ಶಾಪಿಂಗ್ ಸೆಂಟರ್ ಒಕ್ಕೂಟ ಒತ್ತಾಯಿಸಿದೆ.

ಶಾಪಿಂಗ್ ಮಾಲ್ ಉದ್ಯಮಗಳ ದ್ರವ್ಯತೆ ಅಗತ್ಯಗಳಿಗೆ ಆರ್ ಬಿಐ ಕ್ರಮ ಮಾತ್ರ ಸಾಕಾಗುವುದಿಲ್ಲ. ಅದು ಸಮರ್ಪಕ ಕೂಡ ಆಗಿಲ್ಲ. ಶಾಪಿಂಗ್ ಸೆಂಟರ್ ಗಳು ಮೆಟ್ರೊ ನಗರಗಳಲ್ಲಿ ಮತ್ತು ದೊಡ್ಡ ನಗರಗಳಲ್ಲಿ ಮಾತ್ರ ಇದ್ದು ಇಲ್ಲಿ ದೊಡ್ಡ ಡೆವೆಲಪರ್ ಗಳು, ಖಾಸಗಿ ಹೂಡಿಕೆದಾರರು ಮತ್ತು ವಿದೇಶಿ ಹೂಡಿಕೆದಾರರು ಮಾತ್ರ ಹೂಡಿಕೆ ಮಾಡುತ್ತಾರೆ ಎಂಬ ತಪ್ಪು ಅಭಿಪ್ರಾಯವಿದೆ.

ಆದರೆ ಬಹುತೇಕ ಮಾಲ್ ಗಳು ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಭಾಗವಾಗಿರುತ್ತದೆ ಅಥವಾ ದೇಶದಲ್ಲಿರುವ 650ಕ್ಕೂ ಹೆಚ್ಚು ಶಾಪಿಂಗ್ ಸೆಂಟರ್ ಗಳಲ್ಲಿ 550ಕ್ಕೂ ಹೆಚ್ಚು ಸ್ಟಾಂಡ್ ಅಲೋನ್ ಡೆವೆಲಪರ್ ಗಳ ಒಡೆತನ ಹೊಂದಿದ್ದು ಸಾವಿರಕ್ಕೂ ಹೆಚ್ಚು ಸಣ್ಣ ಶಾಪಿಂಗ್ ಸೆಂಟರ್ ಗಳು ಸಣ್ಣ ನಗರಗಳಲ್ಲಿವೆ, ಇವೆಲ್ಲವೂ ಇಂದು ಉಳಿವಿಗಾಗಿ ಹೋರಾಡುತ್ತಿವೆ ಎಂದು ಶಾಪಿಂಗ್ ಸೆಂಟರ್ ಒಕ್ಕೂಟ ಅಂಕಿಅಂಶ ಹೇಳುತ್ತದೆ.

ಸಂಘಟಿತ ಚಿಲ್ಲರೆ ಉದ್ಯಮವು ಲಾಕ್ ಡೌನ್ ಆದ ನಂತರ ತೀವ್ರ ಸಂಕಷ್ಟದಲ್ಲಿವೆ. ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ. ಇಎಂಐ ಅವಧಿ ವಿಸ್ತರಣೆ ಉದ್ಯಮದ ಮೇಲೆ ಹಣದ ಹರಿವಿಗೆ ಹೆಚ್ಚು ಸಹಾಯ ಮಾಡುವುದಿಲ್ಲ ಎಂದು ಶಾಪಿಂಗ್ ಸೆಂಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷ ಅಮಿತಾಬ್ ತನೆಜ ಹೇಳಿದ್ದಾರೆ.

ಈ ವಲಯದ ಪುನಶ್ಚೇತನಕ್ಕೆ ದೀರ್ಘಾವಧಿಯ ಫಲದ ಯೋಜನೆಗಳು ಅಗತ್ಯವಾಗಿದೆ. ಮಾಲ್ ಗಳು ಹೆಚ್ಚು ಸುರಕ್ಷಿತ, ನಿಖರವಾದ, ನಿಯಂತ್ರಿತ ಪರಿಸರದಲ್ಲಿದ್ದರೂ ಕೂಡ ದುರದೃಷ್ಟವಶಾತ್ ಅವುಗಳನ್ನು ತೆರೆಯಲು ಸರ್ಕಾರ ಅನುಮತಿ ಕೊಟ್ಟಿಲ್ಲ. ಇದರಿಂದ ಅನೇಕರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಯಿದ್ದು ಹಲವು ಮಳಿಗೆಗಳು ಮುಚ್ಚುವ ಪರಿಸ್ಥಿತಿ ಉಂಟಾಗಬಹುದು ಎಂದು ತನೆಜ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT