ಮಾರ್ಕ್ ಜುಕರ್ ಬರ್ಗ್ 
ವಾಣಿಜ್ಯ

ವಾಟ್ಸಪ್ ಮೂಲಕ ಹಣ ರವಾನೆಗೆ ಯಾವುದೇ ರೀತಿಯ ಶುಲ್ಕವಿಲ್ಲ: ಮಾರ್ಕ್ ಜುಕರ್ ಬರ್ಗ್!

ವಾಟ್ಸಪ್ ಮೂಲಕ ಹಣ ರವಾನೆಗೆ ಯಾವುದೇ ರೀತಿಯ ಶುಲ್ಕವಿಲ್ಲ ಎಂದು ವಾಟ್ಸಪ್ ನ ಮಾಲೀಕತ್ವವಿರುವ ಫೇಸ್ ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ: ವಾಟ್ಸಪ್ ಮೂಲಕ ಹಣ ರವಾನೆಗೆ ಯಾವುದೇ ರೀತಿಯ ಶುಲ್ಕವಿಲ್ಲ ಎಂದು ವಾಟ್ಸಪ್ ನ ಮಾಲೀಕತ್ವವಿರುವ ಫೇಸ್ ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಹೇಳಿದ್ದಾರೆ.

ವಾಟ್ಸಪ್ ನ ನೂತನ ಸೇವೆ ಪಾಟ್ಸಪ್ ಯುಪಿಐ ಪೇ ಸೇವೆ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಜುಕರ್ ಬರ್ಗ್, ವಾಟ್ಸಪ್ ನಲ್ಲಿ ಇದೀಗ ನೀವು ಹಣವನ್ನು ಕೂಡ ವರ್ಗಾವಣೆ ಮಾಡಬಹುದು. ವಾಟ್ಸಪ್ ಪೇ ಸೇವೆ 140ಕ್ಕೂ ಹೆಚ್ಚು ಬ್ಯಾಂಕ್ ಗಳನ್ನು ಒಳಗೊಂಡಿದ್ದು, ನಿಮ್ಮ ಸ್ನೇಹಿತರಿಗೆ, ಕುಟುಂಬಸ್ಥರಿಗೆ  ಸುಲಭವಾಗಿ ವಾಟ್ಸಪ್ ಮೂಲಕ ಹಣದ ವರ್ಗಾವಣೆ ಮಾಡಬಹುದು. ಈ ಸೇವೆಗೆ ವಾಟ್ಸಪ್ ಯಾವುದೇ ರೀತಿಯ ಶುಲ್ಕ ವಿಧಿಸುತ್ತಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ವಾಟ್ಸಪ್ ಪೇಮೆಂಟ್ ಸೇವೆ ಭಾರತದ 10 ಸ್ಥಳೀಯ ಭಾಷೆಗಳಲ್ಲಿ ಲಭ್ಯವಿದ್ದು, ಯುಪಿಐಗೆ ಒಳಗೊಂಡಿರುವ ಚಾಲ್ತಿಯಲ್ಲಿರುವ ಡೆಬಿಟ್ ಕಾರ್ಡ್ ಅನ್ನು ವಾಟ್ಸಪ್ ಪೇಗೆ ಲಿಂಕ್ ಮಾಡುವ ಮೂಲಕ ಸುಲಭವಾಗಿ ಹಣ ವರ್ಗಾವಣೆ ಮಾಡಬಹುದು. ಈ ಸೇವೆ ಹೊಸ ಆವೃತ್ತಿಯ ವಾಟ್ಸಪ್ ನಲ್ಲಿ ಲಭ್ಯವಿದೆ. ಈ  ಕುರಿತಂತೆ ನಾವು ನ್ಯಾಷನಲ್ ಪೇಮೆಂಟ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ (NPCI)ದೊಂದಿಗೆ ಚರ್ಚೆ ನಡೆಸಿದ್ದು, ಅನುಮೋದನೆ ಕೂಡ ಪಡೆದಿದ್ದೇವೆ ಎಂದು ಜುಕರ್ ಬರ್ಗ್ ಹೇಳಿದ್ದಾರೆ.

'ಜನರು ಹಣಕಾಸಿನ ಪರಿಕರಗಳನ್ನು ಬಳಕೆ ಮಾಡಿದಾಗ, ತಮ್ಮನ್ನು ಮತ್ತು ಇತರರನ್ನು ಆರ್ಥಿಕವಾಗಿ ಬೆಂಬಲಿಸಲು ಅಥವಾ ವ್ಯವಹಾರವನ್ನು ಪ್ರಾರಂಭಿಸಲು ಅವರಿಗೆ ಹೆಚ್ಚಿನ ಅಧಿಕಾರವಿದೆ. ದೀರ್ಘಾವಧಿಯವರೆಗೆ, ಜನರಿಗೆ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ, ಅದು ಜನರಿಗೆ ಅವರ ಹಣದ ಮೇಲೆ  ನಿಯಂತ್ರಣವನ್ನು ನೀಡುತ್ತದೆ, ಮತ್ತು ಪಾವತಿಗಳನ್ನು ಸುಲಭಗೊಳಿಸುತ್ತದೆ. ಈ ನಿಟ್ಟಿನಲ್ಲಿ ನಮ್ಮದು ಒಂದು ಸಣ್ಣ ಹೆಜ್ಜೆಯಾಗಿದ್ದು ಅದು ನಿಜವಾಗಿಯೂ ಸಹಾಯ ಮಾಡುತ್ತದೆ ಎಂದು ಜುಕರ್ ಬರ್ಗ್ ಹೇಳಿದ್ದಾರೆ. 

ನಿನ್ನೆಯಷ್ಟೇ NPCI ವಾಟ್ಸಪ್ ತನ್ನ ಸೇವೆಗಳಲ್ಲಿ ಯುಪಿಐ ಪೇಮೆಂಟ್ ಅನ್ನು ವಿಸ್ತರಣೆ ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಅಲ್ಲದೆ ಗರಿಷ್ಠ 20 ಮಿಲಿಯನ್ ಬಳಕೆದಾರರನ್ನು ಹೊಂದಲು NPCI ವಾಟ್ಸಪ್ ಗೆ ಅನುಮತಿ ನೀಡಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT