ಸಹರಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ 
ವಾಣಿಜ್ಯ

ಸಹರಾ ಗ್ರೂಪ್ ನಿಂದ ಹೂಡಿಕೆದಾರರಿಗೆ 62,600 ಕೋಟಿ ರೂ. ಹಣ ಬಾಕಿ: ಸುಪ್ರೀಂ ಕೋರ್ಟ್ ಮೊರೆ ಹೋದ ಸೆಬಿ 

ಸಹರಾ ಗ್ರೂಪ್ ಗೆ ಮತ್ತೊಂದು ಬಾರಿ ಹಿನ್ನೆಡೆಯಾಗಿದೆ. ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಪ್ರಾಧಿಕಾರ ಸೆಬಿ, ಹೂಡಿಕೆದಾರರಿಗೆ ನೀಡಲಿರುವ ಬಾಕಿ ಉಳಿಕೆ ಮೊತ್ತ 62 ಸಾವಿರದ 602 ಕೋಟಿ ರೂಪಾಯಿಗಳನ್ನು ಠೇವಣಿಯಿರಿಸಲು ಸಹಾರಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಮತ್ತು ಅವರ ಎರಡು ಕಂಪೆನಿಗಳಿಗೆ ಆದೇಶ ನೀಡಬೇಕೆಂದು ಸೆಬಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ನವದೆಹಲಿ:ಸಹರಾ ಗ್ರೂಪ್ ಗೆ ಮತ್ತೊಂದು ಬಾರಿ ಹಿನ್ನೆಡೆಯಾಗಿದೆ. ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಪ್ರಾಧಿಕಾರ ಸೆಬಿ, ಹೂಡಿಕೆದಾರರಿಗೆ ನೀಡಲಿರುವ ಬಾಕಿ ಉಳಿಕೆ ಮೊತ್ತ 62 ಸಾವಿರದ 602 ಕೋಟಿ ರೂಪಾಯಿಗಳನ್ನು ಠೇವಣಿಯಿರಿಸಲು ಸಹಾರಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಮತ್ತು ಅವರ ಎರಡು ಕಂಪೆನಿಗಳಿಗೆ ಆದೇಶ ನೀಡಬೇಕೆಂದು ಸೆಬಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಸೆಬಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ, ಇಷ್ಟು ಮೊತ್ತವನ್ನು ಭರಿಸಲು ಸುಬ್ರತಾ ರಾಯ್ ಕಂಪೆನಿಗೆ ಸಾಧ್ಯವಾಗದಿದ್ದರೆ ಅವರನ್ನು ಕಸ್ಟಡಿಗೊಪ್ಪಿಸಬೇಕೆಂದು ಸಹ ಒತ್ತಾಯಿಸಿದೆ. 2014ರ ಮಾರ್ಚ್ ನಲ್ಲಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಎದುರಿಸಲು ವಿಫಲವಾದ ಹಿನ್ನೆಲೆಯಲ್ಲಿ ಬಂಧನಕ್ಕೀಡಾಗಿದ್ದ ಸುಬ್ರತಾ ರಾಯ್ 2016ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.

ಸಹರಾ ಗ್ರೂಪ್ 2012 ಮತ್ತು 2015ರ ಕೋರ್ಟ್ ಆದೇಶವನ್ನು ಪಾಲಿಸಲು ವಿಫಲವಾಗಿದೆ. ಶೇಕಡಾ 15ರಷ್ಟು ವಾರ್ಷಿಕ ಬಡ್ಡಿ ಮೊತ್ತ ಸೇರಿದಂತೆ ಹೂಡಿಕೆದಾರರಿಂದ ಸಂಗ್ರಹಿಸಿದ ಎಲ್ಲಾ ಮೊತ್ತವನ್ನು ಸೆಬಿಯನ್ನಿ ಠೇವಣಿಯಿರಿಸಲು ಕಂಪೆನಿ ವಿಫಲವಾಗಿದೆ ಎಂದು ಸೆಬಿ ಆರೋಪಿಸಿದೆ. ಆದರೆ ಸಹರಾ ಗ್ರೂಪ್ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. 

ಹೂಡಿಕೆದಾರರಿಂದ ಸಂಗ್ರಹಿಸಿರುವ ಬಹುತೇಕ ಠೇವಣಿಗಳನ್ನು ಹಿಂತಿರುಗಿಸಿದ್ದು, ಸಂಬಂಧಪಟ್ಟ ದಾಖಲೆಗಳನ್ನು ಸೆಬಿಗೆ ನೀಡಲಾಗಿದೆ. ಹೂಡಿಕೆ ಮಾಡಿ ಹಣ ಪಡೆಯಲು ಬಾಕಿ ಇರುವವರು ಹಣ ಪಡೆಯುವಂತೆ ಪತ್ರಿಕೆಗಳಲ್ಲಿ ಜಾಹೀರಾತು ಕೂಡ ನೀಡಿದ್ದೆವು ಎಂದು ಸಹರಾ ಗ್ರೂಪ್ ಈ ಹಿಂದೆ ಕೋರ್ಟ್ ಗೆ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT