ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ರಾಜ್ಯಗಳ ಜಿಎಸ್ಟಿ ಕೊರತೆ ಸರಿತೂಗಿಸಲು 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಕೇಂದ್ರ ಸರ್ಕಾರ ಮುಂದು!

ರಾಜ್ಯಗಳ ಜಿಎಸ್ಟಿ ಆದಾಯದ ಕೊರತೆಯನ್ನು ನಿವಾರಿಸಲು ವಿಶೇಷ ಅವಕಾಶದಡಿ 1.1 ಲಕ್ಷ ಕೋಟಿ ರೂಪಾಯಿ ಸಾಲ ಪಡೆಯಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿ: ರಾಜ್ಯಗಳ ಜಿಎಸ್ಟಿ ಆದಾಯದ ಕೊರತೆಯನ್ನು ನಿವಾರಿಸಲು ವಿಶೇಷ ಅವಕಾಶದಡಿ 1.1 ಲಕ್ಷ ಕೋಟಿ ರೂಪಾಯಿ ಸಾಲ ಪಡೆಯಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಬಗ್ಗೆ ಹೇಳಿಕೆ ಹೊರಡಿಸಿರುವ ಕೇಂದ್ರ ಹಣಕಾಸು ಸಚಿವಾಲಯ, ಜಿಎಸ್ಟಿ ಅನುದಾನ ಸೆಸ್ ಬಿಡುಗಡೆಯಡಿ ಸಾಲದ ರೂರದಲ್ಲಿ ರಾಜ್ಯಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ. ಅಂದರೆ ಕೇಂದ್ರ ಸರ್ಕಾರ ಸಾಲ ಪಡೆದ ನಂತರ ಅದು ರಾಜ್ಯದ ಅನುದಾನದಲ್ಲಿ ಕಂಡುಬರುತ್ತದೆ.

ಆದರೆ ಕೆಲವು ರಾಜ್ಯಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್, ಇದನ್ನು ಒಪ್ಪಲು ಸಾಧ್ಯವಿಲ್ಲ. ಸಾಲದ ಮೊತ್ತ ರಾಜ್ಯ ಸರ್ಕಾರದ ಖಜಾನೆಯಲ್ಲಿ ತೋರಿಸಲ್ಪಡುವುದರಿಂದ ರಾಜ್ಯ ಸರ್ಕಾರಗಳ ಮೇಲೆ ಹೊರೆಯಾಗುತ್ತದೆ ಎಂದಿದ್ದಾರೆ. ಆದರೆ ಕೇರಳ ಹಣಕಾಸು ಸಚಿವರು ಇದನ್ನು ಒಪ್ಪಿದ್ದಾರೆ. 2023ಕ್ಕೆ ಕೇಂದ್ರ ಸರ್ಕಾರ ಎಷ್ಟು ಜಿಎಸ್ಟಿ ಪರಿಹಾರ ನೀಡುತ್ತದೆ, ಈ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಕೇರಳ ಹಣಕಾಸು ಸಚಿವ ಥಾಮಸ್ ಇಸ್ಸಾಕ್ ಹೇಳಿದ್ದಾರೆ.

ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಕೂಡ ಇದನ್ನು ಒಪ್ಪಿದ್ದು, ಕೇಂದ್ರ ಸರ್ಕಾರ 1.1 ಲಕ್ಷ ಕೋಟಿ ರೂಪಾಯಿ ಸಾಲ ಪಡೆಯಲು ಸಿದ್ದವಿದ್ದು, ರಾಜ್ಯಗಳಿಗೆ ಒಂದಾದ ಬಳಿಕ ಒಂದರಂತೆ ಸಾಲಗಳನ್ನು ನೀಡಿದರೆ ನಾನು ಇದನ್ನು ಒಪ್ಪುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT