ಸಂಗ್ರಹ ಚಿತ್ರ 
ವಾಣಿಜ್ಯ

ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ರದ್ದುಪಡಿಸಲು ಮುಂದಾದ ಆರ್ ಬಿಐ

ಭಾರತೀಯ ರಿಸರ್ವ್ ಬ್ಯಾಂಕ್, ಬಹಳ ವರ್ಷಗಳ ನಂತರ ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ವಿಧಿಸುವ  ನಿಯಮದಲ್ಲಿ ಕೆಲ ಮಹತ್ವದ ಬದಲಾವಣೆ ತರಲು ಮುಂದಾಗಿದೆ. 

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್, ಬಹಳ ವರ್ಷಗಳ ನಂತರ ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ವಿಧಿಸುವ  ನಿಯಮದಲ್ಲಿ ಕೆಲ ಮಹತ್ವದ ಬದಲಾವಣೆ ತರಲು ಮುಂದಾಗಿದೆ. 

ಬ್ಯಾಂಕ್ ಗ್ರಾಹಕರು 5000 ಸಾವಿರಕ್ಕಿಂತ ಹೆಚ್ಚು ಹಣ ಡ್ರಾಮಾಡಿದಾಗ ವಿಧಿಸಲಾಗುತ್ತಿದ್ದಂತ ಶುಲ್ಕದಿಂದ ವಿನಾಯಿತಿ ನೀಡುವ ನಿಯಮದಲ್ಲಿ ಬದಲಾವಣೆಗೆ ಮುಂದಾಗಿದೆ.

ಎಟಿಎಂನಿಂದ 5000 ರೂಪಾಯಿಗಿಂತ ಹೆಚ್ಚು ಹಣ ಡ್ರಾ ಮಾಡಿದರೆ, ಈ ಮೊತ್ತಕ್ಕೆ ನೀವು ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ. ಎಂಟು ವರ್ಷಗಳ ನಂತರ ಎಟಿಎಂ ವಿತ್ ಡ್ರಾ ನಿಯಮಬದಲಿಸಲು ಸಿದ್ಧತೆ  ಮಾಡಿದೆ. ಈ ಹೊಸ ನಿಯಮವು ಎಟಿಎಂಗಳಿಂದ ತಿಂಗಳಿಗೆ ಐದು ಬಾರಿ ಉಚಿತ ಹಣ ಪಡೆಯುವುದಕ್ಕೆ ಅನ್ವಯಿಸುವುದಿಲ್ಲ.

ವರದಿಗಳ ಪ್ರಕಾರ, ಎಟಿಎಂನಿಂದ 5000 ರೂಪಾಯಿಗಿಂತ ಹೆಚ್ಚು ಹಣವನ್ನು ಹಿಂತೆಗೆದುಕೊಳ್ಳುವ ಗ್ರಾಹಕರು ಹೆಚ್ಚುವರಿ 24 ರೂಪಾಯಿ ಪಾವತಿಸಬೇಕಾಗಲಿದೆ. 

ಎಟಿಎಂಗಳಿಂದ ನಗದು ವಿತ್ ಡ್ರಾ ಮಾಡುವ ನಿಯಮಗಳ ಪ್ರಕಾರ, ತಿಂಗಳಿಗೆ ಐದು ಬಾರಿ ಹಣ ಡ್ರಾ ಮಾಡಬಹುದು. ಒಂದು ವೇಳೆ ಒಂದು ತಿಂಗಳಲ್ಲಿ ಐದಕ್ಕಿಂತ ಹೆಚ್ಚು ಬಾರಿ ನಗದು ಹಿಂತೆಗೆತ ಮಾಡಿದರೆ, ಆರನೇ ವಿತ್ ಡ್ರಾಗೆ 20 ರೂಪಾಯಿ ಶುಲ್ಕ ಪಾವತಿಸಬೇಕಾಗಿತ್ತು, ಇಂತಹ ಹೆಚ್ಚವರಿ ವಿತ್ ಡ್ರಾ ಶುಲ್ಕವನ್ನು ರದ್ದು ಪಡಿಸಲು ಇದೀಗ ಆರ್ ಬಿ ಐ ಮುಂದಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸಮಿತಿ ಮಾಡಿರುವ ಶಿಫಾರಸುಗಳ ಆಧಾರದ ಮೇಲೆ ಎಟಿಎಂಗಳಿಂದ ಹಣ ಡ್ರಾ ಮಾಡುವ ನಿಯಮ ಬದಲಿಸಲಾಗಿದೆ. ಆದರೆ, ಸಮಿತಿಯ ವರದಿ ಇನ್ನೂ ಬಹಿರಂಗಗೊಂಡಿಲ್ಲ. ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಅಡಿಯಲ್ಲಿ ಕೇಳಲಾದ ಮಾಹಿತಿಯಲ್ಲಿ ಈ ವಿವರ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT