ಸಂಗ್ರಹ ಚಿತ್ರ 
ವಾಣಿಜ್ಯ

ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ರದ್ದುಪಡಿಸಲು ಮುಂದಾದ ಆರ್ ಬಿಐ

ಭಾರತೀಯ ರಿಸರ್ವ್ ಬ್ಯಾಂಕ್, ಬಹಳ ವರ್ಷಗಳ ನಂತರ ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ವಿಧಿಸುವ  ನಿಯಮದಲ್ಲಿ ಕೆಲ ಮಹತ್ವದ ಬದಲಾವಣೆ ತರಲು ಮುಂದಾಗಿದೆ. 

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್, ಬಹಳ ವರ್ಷಗಳ ನಂತರ ಎಟಿಎಂ ವಿತ್ ಡ್ರಾ ಮೇಲಿನ ಶುಲ್ಕ ವಿಧಿಸುವ  ನಿಯಮದಲ್ಲಿ ಕೆಲ ಮಹತ್ವದ ಬದಲಾವಣೆ ತರಲು ಮುಂದಾಗಿದೆ. 

ಬ್ಯಾಂಕ್ ಗ್ರಾಹಕರು 5000 ಸಾವಿರಕ್ಕಿಂತ ಹೆಚ್ಚು ಹಣ ಡ್ರಾಮಾಡಿದಾಗ ವಿಧಿಸಲಾಗುತ್ತಿದ್ದಂತ ಶುಲ್ಕದಿಂದ ವಿನಾಯಿತಿ ನೀಡುವ ನಿಯಮದಲ್ಲಿ ಬದಲಾವಣೆಗೆ ಮುಂದಾಗಿದೆ.

ಎಟಿಎಂನಿಂದ 5000 ರೂಪಾಯಿಗಿಂತ ಹೆಚ್ಚು ಹಣ ಡ್ರಾ ಮಾಡಿದರೆ, ಈ ಮೊತ್ತಕ್ಕೆ ನೀವು ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ. ಎಂಟು ವರ್ಷಗಳ ನಂತರ ಎಟಿಎಂ ವಿತ್ ಡ್ರಾ ನಿಯಮಬದಲಿಸಲು ಸಿದ್ಧತೆ  ಮಾಡಿದೆ. ಈ ಹೊಸ ನಿಯಮವು ಎಟಿಎಂಗಳಿಂದ ತಿಂಗಳಿಗೆ ಐದು ಬಾರಿ ಉಚಿತ ಹಣ ಪಡೆಯುವುದಕ್ಕೆ ಅನ್ವಯಿಸುವುದಿಲ್ಲ.

ವರದಿಗಳ ಪ್ರಕಾರ, ಎಟಿಎಂನಿಂದ 5000 ರೂಪಾಯಿಗಿಂತ ಹೆಚ್ಚು ಹಣವನ್ನು ಹಿಂತೆಗೆದುಕೊಳ್ಳುವ ಗ್ರಾಹಕರು ಹೆಚ್ಚುವರಿ 24 ರೂಪಾಯಿ ಪಾವತಿಸಬೇಕಾಗಲಿದೆ. 

ಎಟಿಎಂಗಳಿಂದ ನಗದು ವಿತ್ ಡ್ರಾ ಮಾಡುವ ನಿಯಮಗಳ ಪ್ರಕಾರ, ತಿಂಗಳಿಗೆ ಐದು ಬಾರಿ ಹಣ ಡ್ರಾ ಮಾಡಬಹುದು. ಒಂದು ವೇಳೆ ಒಂದು ತಿಂಗಳಲ್ಲಿ ಐದಕ್ಕಿಂತ ಹೆಚ್ಚು ಬಾರಿ ನಗದು ಹಿಂತೆಗೆತ ಮಾಡಿದರೆ, ಆರನೇ ವಿತ್ ಡ್ರಾಗೆ 20 ರೂಪಾಯಿ ಶುಲ್ಕ ಪಾವತಿಸಬೇಕಾಗಿತ್ತು, ಇಂತಹ ಹೆಚ್ಚವರಿ ವಿತ್ ಡ್ರಾ ಶುಲ್ಕವನ್ನು ರದ್ದು ಪಡಿಸಲು ಇದೀಗ ಆರ್ ಬಿ ಐ ಮುಂದಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸಮಿತಿ ಮಾಡಿರುವ ಶಿಫಾರಸುಗಳ ಆಧಾರದ ಮೇಲೆ ಎಟಿಎಂಗಳಿಂದ ಹಣ ಡ್ರಾ ಮಾಡುವ ನಿಯಮ ಬದಲಿಸಲಾಗಿದೆ. ಆದರೆ, ಸಮಿತಿಯ ವರದಿ ಇನ್ನೂ ಬಹಿರಂಗಗೊಂಡಿಲ್ಲ. ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಅಡಿಯಲ್ಲಿ ಕೇಳಲಾದ ಮಾಹಿತಿಯಲ್ಲಿ ಈ ವಿವರ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel