ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 
ವಾಣಿಜ್ಯ

ವಾಹನಗಳ ಮೇಲಿನ ಜಿಎಸ್ ಟಿ ದರ ಕಡಿತದ ಸುಳಿವು ನೀಡಿದ ಜಾವಡೇಕರ್

ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ಸಿಗಲಿದೆ ಎಂದು ಹೇಳಿದ್ದಾರೆ.

ನವದೆಹಲಿ: ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ಸಿಗಲಿದೆ ಎಂದು ಹೇಳಿದ್ದಾರೆ.

ಆಟೋ ಸ್ಕ್ರ್ಯಾಪೇಜ್ ನೀತಿ ಸಿದ್ಧವಾಗಿದೆ ಮತ್ತು ಈ ಸಂಬಂಧ ಎಲ್ಲಾ ಪಾಲುದಾರರು ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಜಾವಡೇಕರ್ ಅವರು ತಿಳಿಸಿದ್ದಾರೆ.

ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತದ ಸಾಧ್ಯತೆಗಳ ಬಗ್ಗೆ ವಿವರಿಸಿದ ಅವರು, ದರ ಕಡಿತ ಪ್ರಸ್ತಾವನೆಯನ್ನು ಹಣಕಾಸು ಸಚಿವಾಲಯವು ರೂಪಿಸುತ್ತಿದೆ ಮತ್ತು ನಾನು ಈಗಲೇ ಎಲ್ಲಾ ವಿವರ ನೀಡಲು ಸಾಧ್ಯವಿಲ್ಲ ಎಂದರು.

ಆದಾಗ್ಯೂ, ಜಾವಡೇಕರ್, "ಸ್ವಾಭಾವಿಕವಾಗಿ ತಾರ್ಕಿಕ ಅನುಕ್ರಮದಲ್ಲಿ, 2-ವೀಲರ್, 3-ವೀಲರ್, ಸಾರ್ವಜನಿಕ ಸಾರಿಗೆ ವಾಹನಗಳು, ಆ ವಿಭಾಗದಲ್ಲಿ ಮಾತ್ರ ಮತ್ತು ನಂತರ 4-ವೀಲರ್ಗಳ ಮೇಲಿನ ದರ ಕಡಿತ ಮಾಡಬಹದು. ಶೀಘ್ರದಲ್ಲೇ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಜಾವಡೇಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ', ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು

2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಬಿಹಾರ ರೀತಿ ಫಲಿತಾಂಶ ಮರುಕಳಿಸಲಿದೆ: ಎಚ್‌ಡಿ ಕುಮಾರಸ್ವಾಮಿ ಭವಿಷ್ಯ

ಕಬ್ಬು ಬೆಳೆಗೆ ಬೆಂಕಿ: 'ಪೂರ್ವ ಯೋಜಿತ ಕೃತ್ಯ'.. ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ

ಬಿಹಾರ ಚುನಾವಣೆ 2025: ಸೋತು ಗೆದ್ದ ತೇಜಸ್ವಿ ಯಾದವ್; ಕುಟುಂಬದ ಭದ್ರಕೋಟೆ ರಾಘೋಪುರ್ ಉಳಿಸಿಕೊಳ್ಳಲು ಸುಸ್ತೋ ಸುಸ್ತು!

SCROLL FOR NEXT