ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 
ವಾಣಿಜ್ಯ

ವಾಹನಗಳ ಮೇಲಿನ ಜಿಎಸ್ ಟಿ ದರ ಕಡಿತದ ಸುಳಿವು ನೀಡಿದ ಜಾವಡೇಕರ್

ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ಸಿಗಲಿದೆ ಎಂದು ಹೇಳಿದ್ದಾರೆ.

ನವದೆಹಲಿ: ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ಸಿಗಲಿದೆ ಎಂದು ಹೇಳಿದ್ದಾರೆ.

ಆಟೋ ಸ್ಕ್ರ್ಯಾಪೇಜ್ ನೀತಿ ಸಿದ್ಧವಾಗಿದೆ ಮತ್ತು ಈ ಸಂಬಂಧ ಎಲ್ಲಾ ಪಾಲುದಾರರು ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಜಾವಡೇಕರ್ ಅವರು ತಿಳಿಸಿದ್ದಾರೆ.

ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತದ ಸಾಧ್ಯತೆಗಳ ಬಗ್ಗೆ ವಿವರಿಸಿದ ಅವರು, ದರ ಕಡಿತ ಪ್ರಸ್ತಾವನೆಯನ್ನು ಹಣಕಾಸು ಸಚಿವಾಲಯವು ರೂಪಿಸುತ್ತಿದೆ ಮತ್ತು ನಾನು ಈಗಲೇ ಎಲ್ಲಾ ವಿವರ ನೀಡಲು ಸಾಧ್ಯವಿಲ್ಲ ಎಂದರು.

ಆದಾಗ್ಯೂ, ಜಾವಡೇಕರ್, "ಸ್ವಾಭಾವಿಕವಾಗಿ ತಾರ್ಕಿಕ ಅನುಕ್ರಮದಲ್ಲಿ, 2-ವೀಲರ್, 3-ವೀಲರ್, ಸಾರ್ವಜನಿಕ ಸಾರಿಗೆ ವಾಹನಗಳು, ಆ ವಿಭಾಗದಲ್ಲಿ ಮಾತ್ರ ಮತ್ತು ನಂತರ 4-ವೀಲರ್ಗಳ ಮೇಲಿನ ದರ ಕಡಿತ ಮಾಡಬಹದು. ಶೀಘ್ರದಲ್ಲೇ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಜಾವಡೇಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಾಲೀಕರು, ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!

Wipro ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ Azim Premji

ಕೇಂದ್ರದಿಂದ 'ಬಲಿಪಶು ಮಾಡುವ ತಂತ್ರ'; ಆದ್ರೆ ನಿಜವಾದ ಸಮಸ್ಯೆ ನಿರುದ್ಯೋಗ: ವಾಂಗ್ಚುಕ್ ಕಿಡಿ

Tejas jets procure: ಭಾರತೀಯ ವಾಯುಪಡೆಗೆ 97 'ತೇಜಸ್ ಜೆಟ್' ಗಳ ಖರೀದಿ: HAL ಜೊತೆಗೆ ಕೇಂದ್ರ ಸರ್ಕಾರದ ಒಪ್ಪಂದ!

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ

SCROLL FOR NEXT